ಕೊಪ್ಪಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಜನವರಿ 16 ರಿಂದ 10 ದಿನಗಳ ತರಕಾರಿ ಬೆಳೆಗಳ ನರ್ಸರಿ ತರಬೇತಿ ಮತ್ತು ಫೆಬ್ರವರಿ 03 ರಿಂದ 13 ದಿನಗಳ ವಾಣಿಜ್ಯ ತೋಟಗಾರಿಕೆ ಉಚಿತ ತರಬೇತಿಗಳು ಆರಂಭವಾಗಲಿದ್ದು, ತರಬೇತಿ ಅವಧಿಯಲ್ಲಿ ಊಟ ಹಾಗೂ ವಸತಿಯು ಉಚಿತವಾಗಿರುತ್ತದೆ.
ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಜನವರಿ 14 ಕೊನೆಯ ದಿನವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್ ನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.
ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ, ದೂ.ಸಂ: 9980510717, 9483485489 ಗೆ ಸಂಪರ್ಕಿಸಬಹುದು.




