ಕೊಪ್ಪಳ: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಿಂದ ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
18 ರಿಂದ 45 ವಯೋಮಾನದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಜನವರಿ 16 ರಿಂದ 10 ದಿನಗಳ ತರಕಾರಿ ಬೆಳೆಗಳ ನರ್ಸರಿ ತರಬೇತಿ ಮತ್ತು ಫೆಬ್ರವರಿ 03 ರಿಂದ 13 ದಿನಗಳ ವಾಣಿಜ್ಯ ತೋಟಗಾರಿಕೆ ಉಚಿತ ತರಬೇತಿಗಳು ಆರಂಭವಾಗಲಿದ್ದು, ತರಬೇತಿ ಅವಧಿಯಲ್ಲಿ ಊಟ ಹಾಗೂ ವಸತಿಯು ಉಚಿತವಾಗಿರುತ್ತದೆ.
ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಜನವರಿ 14 ಕೊನೆಯ ದಿನವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್ ನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಇನ್ನಿತರ ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.
ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಈ ವಿಳಾಸಕ್ಕೆ, ದೂ.ಸಂ: 9980510717, 9483485489 ಗೆ ಸಂಪರ್ಕಿಸಬಹುದು.




