ದಾವಣಗೆರೆ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖಾ ವೆಬ್ಸೈ ಟ್ www.sw.kar.nic.in ನಲ್ಲಿ ಪ್ರೋತ್ಸಾಹಧನಕ್ಕಾಗಿ ಆನ್ಲೈಕನ್ನ ಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ನಾಗರಾಜ ತಿಳಿಸಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ದ್ವಿತೀಯ ಪಿ.ಯು.ಸಿ., ಡಿಪ್ಲಮಾ, ಪದವಿ, ಸ್ನಾತಕೋತ್ತರ, ಬಿ.ಇ., ಮೆಡಿಕಲ್ ಕೋರ್ಸುಗಳಲ್ಲಿ ಪ್ರಥಮ ಬಾರಿಗೆ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಆನ್ಲೈ ನ್ನ ಲ್ಲಿ ಅರ್ಜಿ ಸಲ್ಲಿಸಬಹುದು.
ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ವಿದ್ಯಾರ್ಥಿಯ ಬ್ಯಾಂಕ್ ಖಾತೆ ಸಂಖ್ಯೆಯೊಂದಿಗೆ ಲಿಂಕ್ ಮಾಡಿಸುವುದು ಹಾಗೂ ಜಾತಿ ಪ್ರಮಾಣಪತ್ರ, ಅಂಕಪಟ್ಟಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಬ್ಯಾಂಕ್ ಪಾಸ್ಬುರಕ್ ಜೆರಾಕ್ಸ್, ಆಧಾರ್ ಕಾರ್ಡ್ ಜೆರಾಕ್ಸ್ ಗಳ ದೃಢೀಕೃತ ಪ್ರತಿ ಹಾಗೂ ಅರ್ಜಿ ಹಾಕಿದ ಪ್ರತಿಯನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಸಂಬಂಧಿಸಿದ ತಾಲ್ಲೂಕುಗಳ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ. ಕೊಠಡಿ ಸಂಖ್ಯೆ: 37. ಮೊದಲನೇ ಮಹಡಿ, ಜಿಲ್ಲಾಡಳಿತ ಭವನ, ದಾವಣಗೆರೆ ಇವರನ್ನು ಸಂಪರ್ಕಿಸಬಹುದು.




