ದ್ವಿತೀಯ ಪಿ.ಯು.ಸಿ. ಪದವಿ , ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದವರಿಗೆ ಅವಕಾಶ
ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ, ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಆಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಜಂಟಿ ನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.




