ಬಳ್ಳಾರಿ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಜಿಲ್ಲೆಯ ವಲಸೆ ಕುರಿಗಾರರಿಗೆ ಗುರುತಿನ ಚೀಟಿ ವಿತರಿಸುವ ಯೋಜನೆಯಡಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಅರ್ಜಿದಾರರು ಕನಿಷ್ಠ 20 ಕುರಿಗಳನ್ನು ಹೊಂದಿರಬೇಕು. ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ತಮ್ಮ ತಾಲ್ಲೂಕು ವ್ಯಾಪ್ತಿಯ ಪಶು ಆಸ್ಪತ್ರೆ ಅಥವಾ ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ದಾಖಲೆಗಳೊಂದಿಗೆ ತಮ್ಮ ತಾಲ್ಲೂಕು ವ್ಯಾಪ್ತಿಯ ಪಶು ಆಸ್ಪತ್ರೆ ಅಥವಾ ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಹೊಸಪೇಟೆಯ ಪಶು ಆಸ್ಪತ್ರೆ ಆವರಣದ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ.08394-225129 ಗೆ ಸಂಪರ್ಕಿಸಬಹುದು ಎಂದು ಹೊಸಪೇಟೆಯ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



