ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ಅವಕಾಶ
ದಾವಣಗೆರೆ: ಪ್ರಸಕ್ತ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ನೀರಿನಲ್ಲಿ ಕರಗುವ ರಸಗೊಬ್ಬರ ಘಟಕಕ್ಕೆ ಸಹಾಯಧನ ನೀಡಲು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ರೈತರಿಂದ ಆರ್ಜಿ ಆಹ್ವಾನಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ನೀರಿನಲ್ಲಿ ಕರಗುವ ರಸಗೊಬ್ಬರ ಘಟಕದ ಪ್ರತಿ ಹೆಕ್ಟೇರ್ ಗೆ ವೆಚ್ಚ ರೂ.50000 ಇದ್ದು. ಸಾಮಾನ್ಯ ವರ್ಗದ ರೈತರಿಗೆ ಶೇ.40 ರಂತೆ ರೂ.20000 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರಿಗೆ ಶೇ.50ರಂತೆ ರೂ.25000 ಸಹಾಯಧನವನ್ನು ನೀಡಲಾಗುವುದು.
ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರು ಅನುಮೋದಿತ ಕಂಪನಿಯಿಂದ ರಸಗೊಬ್ಬರ ಖರೀದಿಸಿದ ಮೊತ್ತದ ಬಿಲ್ಲುಗಳನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿಗೆ ಅ.30 ರೊಳಗೆ ಸಲ್ಲಿಸಿದಲ್ಲಿ ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಪ್ರಸನ್ನ ಕುಮಾರ್.ಜಿ.ಹೆಚ್ ರೈ.ಸಂ.ಕೇಂದ್ರ ಕಸಬಾ ಮತ್ತು ಬಿಳಿಚೋಡು ಮೊ.ಸಂ. 9108338179, ಸುನೀಲ್ ಕುಮಾರ್. ಹೆಚ್.ಟಿ ರೈ.ಸಂ. ಕೇಂದ್ರ ಸೂಕ್ತ ಮೊ.ಸಂ. 7899942287 ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಜಗಳೂರು ಇಲ್ಲಿಗೆ ಸಂಪರ್ಕಿಸಬಹುದು.




