ದಾವಣಗೆರೆ: ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶಿಥಿಲವಾಗಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ವಾಜಪೇಯಿ ವಸತಿ ಯೋಜನೆಯಡಿ ಸಾಮಾನ್ಯದಡಿ 177 ಮನೆಗಳು ಲಭ್ಯವಿದ್ದು ಸಹಾಯಧನವಾಗಿ ರೂ.2.70 ಲಕ್ಷ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಪರಿಶಿಷ್ಟ ಪಂಗಡದ 18 ಮನೆಗಳು ಲಭ್ಯವಿದ್ದು ರೂ.3.50 ಲಕ್ಷ ಸಹಾಯಧನ ನೀಡಲಾಗುತ್ತದೆ.
ಆಸಕ್ತರು ಗಂಡ, ಹೆಂಡತಿ ಇಬ್ಬರ ಆಧಾರ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪತ್ರ, ಬ್ಯಾಂಕ್ ಪಾಸ್ ಬುಕ್, ಚಾಲ್ತಿ ಇ-ಸ್ವತ್ತು, ಇಸಿ ನಕಲು, 2 ಭಾವಚಿತ್ರ ಪ್ರತಿಯೊಂದಿಗೆ ಪಾಲಿಕೆಯಲ್ಲಿ ಅರ್ಜಿ ಸಲ್ಲಿಸಬಹುದು.




