ದಾವಣಗೆರೆ: ದಾವಣಗೆರೆ ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕ ಎಂ.ಎಸ್ ಕೌಲಾಪೂರೆ ಮತ್ತು ಉಪಾಧೀಕ್ಷಕರು, ನಿರೀಕ್ಷಕರು ಹರಿಹರ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏ.10 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರಿಸಲಿದ್ದಾರೆ.
- ಅಲೆಮಾರಿಗಳು ಇನ್ನೂ ಅತ್ಯಂತ ಹೀನಾಯ ಸ್ಥಿತಿಗೆ ತಲುಪುವ ಸಾಧ್ಯತೆ: ವಡ್ಡಗೆರೆ ನಾಗರಾಜಯ್ಯ
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಸೌಲಭ್ಯ, ಸೇವೆಗಾಗಿ ಅರ್ಜಿ ಸಲ್ಲಿಸಿದ ವೇಳೆ ವಿಳಂಬ ನೀತಿ, ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸದೆ ತಾರತಮ್ಯ, ಕಳಪೆ ಕಾಮಗಾರಿ, ಹಣ ದುರುಪಯೋಗ, ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ದೂರುಗಳನ್ನು ಸ್ವೀಕರಿಸಲಾಗುತ್ತದೆ.
ಸಾರ್ವಜನಿಕರು ತಮ್ಮ ದೂರುಗಳನ್ನು ಪ್ರಪತ್ರ-1 ಮತ್ತು 2 ರ ಅಫಿಡವಿಟ್ನೊಂದಿಗೆ ಸಲ್ಲಿಸಬಹುದು. ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದ್ದರೆ, ಅಂತಹ ದೂರುಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



