ಚಿತ್ರದುರ್ಗ: ಚಿತ್ರದುರ್ಗ ಸರ್ಕಾರಿ ಬಿಎಸ್ಸಿ ನರ್ಸಿಂಗ್ ಕಾಲೇಜಿನಲ್ಲಿ ಭರ್ತಿಯಾಗದೆ ಉಳಿದಿರುವ 28 ಸೀಟುಗಳಿಗೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಲ್ಲಿ ನೋಂದಾಯಸಿದ ಹಾಗೂ ಸಿ.ಇ.ಟಿ ನೋಂದಣಿ ಸಂಖ್ಯೆ ಹೊಂದಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಮೆರಿಟ್ ಆಧಾರದ ಮೇಲೆ ನಿಯಮಾನುಸಾರ ಸೀಟು ಹಂಚಿಕೆ ಮಾಡಲಾಗುವುದು. ದಾಖಲಾತಿ ಪಡೆಯಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 29 ಸಂಜೆ 5 ಗಂಟೆಯ ಒಳಗಾಗಿ, ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಹೊಸ ತಾಯಿ ಮಕ್ಕಳ ಆಸ್ಪತ್ರೆ 3 ಮಹಡಿಯಲ್ಲಿರುವ ಬಿ.ಎಸ್ಸಿ. ನರ್ಸಿಂಗ್ ಕಾಲೇಜಿಗೆ ಅರ್ಜಿ ಸಲ್ಲಿಸಬೇಕು.
ಅಕ್ಟೋಬರ್ 30 ರಂದು ಕೌನ್ಸಿಲಿಂಗ್ ನಡೆಸಿ ಮಧ್ಯಾಹ್ನ 1 ಗಂಟೆಯ ನಂತರ ಸೀಟು ಹಂಚಿಕೆ ಮಾಡಲಾಗುವುದು. ಅಭ್ಯರ್ಥಿಗಳು ಸಂಜೆ 5 ಗಂಟೆಯ ಒಳಗಾಗಿ ಕಾಲೇಜಿಗೆ ವರದಿ ಮಾಡಿಕೊಳ್ಳಬೇಕು.




