ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಂದ ಮಾಸಾಶನಕ್ಕೆ ಅರ್ಜಿ ಆಹ್ವಾನ

2 years ago

ಶಿವಮೊಗ್ಗ:ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಿಲ್ಲಾ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ 58 ವರ್ಷ ತುಂಬಿರುವ ಪುರುಷ/ಮಹಿಳಾ/ಅಂಗವಿಕಲ ಕಲಾವಿದರುಗಳಿಂದ ಮಾಸಾಶನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಆಸಕ್ತ ಕಲಾವಿದರು ಅರ್ಜಿ ನಮೂನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ಸಲ್ಲಿಸಬೇಕು. 

ಕಲಾವಿದರು ಕನಿಷ್ಠ 25 ವರ್ಷಗಳಿಂದ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿರುವ ದಾಖಲಾತಿ ಹಾಗೂ ರೂ. 1.00 ಲಕ್ಷದೊಳಗಿನ ಆದಾಯ ಪ್ರಮಾಣ ಪತ್ರ ಹೊಂದಿದ್ದು, ಇಂತಹ ಕಲಾವಿದರು ಸರ್ಕಾರದಿಂದ ಇತರೆ ಯಾವುದೇ ಪಿಂಚಣಿಯನ್ನು ಪಡೆಯುತ್ತಿರಬಾರದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-223354 ನ್ನು ಸಂಪರ್ಕಿಸಬಹುದು.

Leave a Reply