ವಿವಿಧ ಕ್ಷೇತ್ರಗಳ ಸಾಧಕರಿಂದ ಸನ್ಮಾನಕ್ಕೆ ಅರ್ಜಿ ಆಹ್ವಾನ

6 months ago

ಹಾಸನ: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರುಗಳಿಗೆ 2025 ನೇ ನವೆಂಬರ್ 01 ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನಿಸಲು ಜಿಲ್ಲಾಡಳಿತದ ವತಿಯಿಂದ ತೀರ್ಮಾನಿಸಲಾಗಿದೆ.

ನಾಡು ನುಡಿ, ಕಲೆ ಸಾಹಿತ್ಯ, ಸಾಂಸ್ಕೃತಿಕ ಕ್ಷೇತ್ರ, ಪತ್ರಿಕಾ ಕ್ಷೇತ್ರ, ಕ್ರೀಡಾ ಕ್ಷೇತ್ರ ಮತ್ತು ಗ್ರಾಮೀಣ ಕಲೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರು ಅಥವಾ ಸಾಧಕರ ಬಗ್ಗೆ ಮಾಹಿತಿ ಹೊಂದಿರುವ ವ್ಯಕ್ತಿಗಳು ಸಾಧಕರ ಮಾಹಿತಿಯನ್ನು ಕರಾರುವಕ್ಕಾದ ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಅರ್ಜಿ ಸಲ್ಲಿಸುತ್ತಿರುವ ಕ್ಷೇತ್ರದ ಬಗ್ಗೆ ಸ್ಪಷ್ಟವಾಗಿ ನಮೂದಿಸಿ ಅಗತ್ಯ ದೃಢೀಕೃತ ದಾಖಲೆಗಳನ್ನು ದಿನಾಂಕ ಅ.30 ರಂದು ಮದ್ಯಾಹ್ನ 12 ಗಂಟೆಯೊಳಗೆ ಸಹಾಯಕ ಆಯುಕ್ತರು ಹಾಸನ ಉಪ ವಿಭಾಗ ಹಾಸನ ಇವರ ಕಚೇರಿಗೆ ಸಲ್ಲಿಸಬಹುದಾಗಿದೆ. ಈ ಹಿಂದೆ ಸನ್ಮಾನ ಪಡೆದುಕೊಂಡಿರುವ ಸಾಧಕರು ಮರು ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಹಾಸನ ಉಪ ವಿಭಾಗಾಧಿಕಾರಿ ತಿಳಿಸಿದ್ದಾರೆ.

Leave a Reply