ದಾವಣಗೆರೆ: ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಮಂಜೂರಾಗಿ ಖಾಲಿ ಇರುವ ಕಿರಿಯ ಆರೋಗ್ಯ ಸಹಾಯಕರ 4 ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆರೋಗ್ಯ ಕಾರ್ಯಕರ್ತರ ತರಬೇತಿ ಹಾಗೂ ಅರೆ ವೈದ್ಯಕೀಯ ಮಂಡಳಿ ನಡೆಸುವ 3 ವರ್ಷಗಳ ಆರೋಗ್ಯ ನೀರಿಕ್ಷಕರ ಡಿಪ್ಲೋಮಾ ಹೊಂದಿರಬೇಕು. .ಪಿ.ಯು.ಸಿ(ವಿಜ್ಞಾನ) ತೇರ್ಗಡೆಯಾಗಿರಬೇಕು ಮತ್ತು ಕರ್ನಾಟಕ ಅರೆ ವೈದ್ಯಕೀಯ ಮಂಡಳಿ ನಡೆಸುವ 2 ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೋಮಾ ಮತ್ತು ಗಣಕಯಂತ್ರ ತರಬೇತಿ ಹೊಂದಿರಬೇಕು.
ಆಗಸ್ಟ್ 17 ರಂದು ಮಧ್ಯಾಹ್ನ 2 ರೊಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳ ಕಚೇರಿ, ಶ್ರೀರಾಮನಗರ ರಸ್ತೆ, ದಾವಣಗೆರೆ ಎಸ್.ಎಸ್.ಆಸ್ಪತ್ರೆ ಹಿಂಭಾಗ, ಎನ್.ಸಿ.ಸಿ.ಕ್ಯಾಂಪ್ ಇಲ್ಲಿ ಅರ್ಜಿ ಪಡೆದು ಮೀಸಲಾತಿ ಮತ್ತು ಅನುಭವಕ್ಕೆ ಸಂಬAಧಿಸಿದ ಎಲ್ಲಾ ಮೂಲ ದಾಖಲಾತಿಗಳ ಪ್ರತಿ ಹಾಗೂ ಭಾವಚಿತ್ರದೊಂದಿಗೆ ಸ್ವಯಂ ಅಭ್ಯರ್ಥಿಯೇ ಹಾಜರಾಗಿ ಅದೇ ದಿನ ಸಂಜೆ 5.00 ಗಂಟೆಯೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಬೇಕು.




