ಚಿತ್ರದುರ್ಗ: ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ನ. 01 ರಂದು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರನ್ನು ಸನ್ಮಾನಿಸಲು ಉದ್ದೇಶಿಸಲಾಗಿದ್ದು, ಅರ್ಹ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ರಾಜ್ಯೋತ್ಸವ ಸನ್ಮಾನ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಗುರುನಾಥ್ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕ್ರೀಡೆ, ಕೃಷಿ, ಸಮಾಜ ಸೇವೆ, ಶಿಕ್ಷಣ ಮತ್ತು ಸಾಹಿತ್ಯ, ಸಂಗೀತ, ರಂಗಭೂಮಿ, ಜಾನಪದ, ಮಾಧ್ಯಮ ಮತ್ತು ಛಾಯಾಗ್ರಹಣ, ವೈದ್ಯಕೀಯ ಮತ್ತು ಸಂಶೋಧನೆ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಹಾಗೂ ಸಾಧನೆ ಮಾಡಿರುವ ಅರ್ಹ ಸಾಧಕರು, ತಮ್ಮ ಸ್ವ-ವಿವರದೊಂದಿಗೆ ಅರ್ಜಿಯನ್ನು ಪೂರಕ ದಾಖಲೆಗಳೊಂದಿಗೆ ಅ. 24 ರಂದು ಸಂಜೆ 05 ಗಂಟೆಯ ಒಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತ.ರಾ.ಸು. ರಂಗಮಂದಿರ, ಚಿತ್ರದುರ್ಗ ಇವರಿಗೆ ಕಚೇರಿ ವೇಳೆಯಲ್ಲಿ ಸಲ್ಲಿಸಬಹುದು.




