ಜಿಲ್ಲಾ ವಿಕಲ ಚೇತನರ ಕಲ್ಯಾಣ ಇಲಾಖೆಯಿಂದ ಅವಕಾಶ
ಧಾರವಾಡ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ 2024-25 ನೇ ಸಾಲಿಗಾಗಿ ಬ್ಯಾಟರಿ ಚಾಲಿತ ವೀಲ್ಚೇರಗಾಗಿ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಹಿಂದೆ ಯಾವುದೇ ಸರ್ಕಾರಿ ಯೋಜನೆಯಲ್ಲಿ ಯಂತ್ರಚಾಲಿತ ದ್ವಿಚಕ್ರ ವಾಹನವನ್ನು ಪಡೆಯದೇ ಇರುವ 15 ವರ್ಷ ಮೇಲ್ಪಟ್ಟ, ದೈಹಿಕ ವಿಕಲಚೇತನರಿಂದ ಆನ್ಲೈನ್ ಮೂಲಕ ಸೇವಾ ಸಿಂಧು ವೆಬ್ ಸೈಟ್ https://suvidha.karnataka.gov.in/ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು, ಜನವರಿ 21, 2025 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಆಯಾ ತಾಲೂಕು ಪಂಚಾಯತ್ ನದಲ್ಲಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲೂಕು ಪಂಚಾಯತ್ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಎಂ.ಆರ್.ಡಬ್ಲ್ಯೂಗಳನ್ನು ಭೇಟಿ ಮಾಡಬಹುದು ಅಥವಾ ಕಛೇರಿ ದೂರವಾಣಿ ಸಂಖ್ಯೆ: 0836-2744474 ಗೆ ಸಂಪರ್ಕಿಸಬಹುದು.




