ಪರಿಶಿಷ್ಟ ಜಾತಿಯ ಶ್ರೇಯಸ್ಸಿಗಾಗಿ ಶ್ರಮಿಸಿರುವ ವ್ಯಕ್ತಿಗಳಿಗೆ ಸನ್ಮಾನಿಸಲು ಅರ್ಜಿ ಆಹ್ವಾನ

1 year ago

ಡಾ. ಬಿ.ಆರ್.ಅಂಬೇಡ್ಕರ್ 134 ನೇ ಜಯಂತಿ

ಧಾರವಾಡ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ಅವರ 134 ನೇ ಜನ್ಮ ಜಯಂತಿಯನ್ನು 2024-25 ನೇ ಸಾಲಿಗೆ ಏಪ್ರಿಲ್ 14, 2025 ರಂದು ಜಿಲ್ಲಾ ಮಟ್ಟದಲ್ಲಿ ಆಚರಿಸಲಾಗುತ್ತಿದೆ. ಪರಿಶಿಷ್ಟ ಜಾತಿಯ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲು ಅರ್ಜಿ ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯ ಶ್ರೇಯಸ್ಸಿಗಾಗಿ ಶ್ರಮಿಸಿರುವ ವ್ಯಕ್ತಿಗಳು ಸಮಾಜ ಕಲ್ಯಾಣ ಇಲಾಖೆಯ ಆಯಾ ತಾಲ್ಲೂಕುಗಳ ಸಹಾಯಕ ನಿರ್ದೇಶಕರ  ಕಚೇರಿಗಳಿಂದ ಅರ್ಜಿ ಪಡೆದು, ಆಯಾ ತಾಲ್ಲೂಕುಗಳಿಗೆ ಏಪ್ರಿಲ್ 08, 2025 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0836-2447201 ಹಾಗೂ ಆಯಾ ತಾಲ್ಲೂಕು ಕಚೇರಿಗಳಿಗೆ ಸಂಪರ್ಕಿಸಬಹುದು.

Leave a Reply