ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ ಅರ್ಜಿ ಆಹ್ವಾನ

7 months ago

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅರ್ಜಿ

ಧಾರವಾಡ: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ನೇರವಾಗಿ ಸಾಲ-ಸಹಾಯ ಧನಕ್ಕಾಗಿ ಅರ್ಜಿ ಆಹ್ವಾನಿಸಿದೆ.

ಹಲವು ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಟ್ಯಾಕ್ಸಿ ಇತ್ಯಾದಿ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ಕನಿಷ್ಠ ರೂ.1 ಲಕ್ಷ (ರೂ.20,000 ಸಬ್ಸಿಡಿ) ಹಾಗೂ ಗರಿಷ್ಠ ರೂ.2 ಲಕ್ಷಗಳ (ರೂ.40,000 ಸಬ್ಸಿಡಿ) ಆರ್ಥಿಕ ನೆರವು ಒದಗಿಸಲಾಗುತ್ತದೆ.

ಆಸಕ್ತರು ಅಕ್ಟೋಬರ್ 31, 2025 ರೊಳಗಾಗಿ ವೆಬ್ ಸೈಟ್ ksbdb.karnataka.gov.in  ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:  8762249230 ಗೆ ಸಂಪರ್ಕಿಸಬಹುದು.

Leave a Reply