ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಬಾಕಿ ಉಳಿದಿರುವ ಕಾಮಗಾರಿಗಳು, ನಾಲೆಗಳ ಆಧುನೀಕರಣ, ನಿರ್ಮಾಣ ಮತ್ತು ಭೂಸ್ವಾಧೀನ ಪ್ರಕ್ರಿಯೆಗಳ ಕುರಿತಂತೆ ಚರ್ಚೆ ನಡೆಸಲು ಜಲಾನಯನ ಪ್ರದೇಶ ವ್ಯಾಪ್ತಿಯ ಎಲ್ಲಾ ಶಾಸಕರು, ರೈತ ಮುಖಂಡರು ಮತ್ತು ಮಂತ್ರಿಗಳೊಂದಿಗೆ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಸಭೆ ನಡೆಸಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಭೆಗೂ ಮುನ್ನ ರೈತರ ಭೂಮಿಗೆ ಪರಿಹಾರ ನೀಡುವ ವಿಚಾರವಾಗಿ ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ ಮತ್ತು ಡಿ ಕೆ ಶಿವಕುಮಾರ್ ಅವರ ನಡುವೆ ತೀವ್ರ ಸ್ವರೂಪದ ಮಾತಿನ ಚಕಮಕಿ ನಡೆಯಿತು.
ರೈತರ ಸಮ್ಮುಖದಲ್ಲಿ ಸಚಿವ ತಿಮ್ಮಾಪುರ ಅವರನ್ನು ಶಿವಕುಮಾರ್ ತರಾಟೆಗೆ ತೆಗೆದುಕೊಂಡರೆ, ಅದಕ್ಕೆ ತಿರುಗೇಟು ನೀಡಿದ ತಿಮ್ಮಾಪುರ ನಾನು ರೈತರ ಪರವಾಗಿ ಮಾತನಾಡುತ್ತಿದ್ದೇನೆ. ಇಲಾಖೆಯ ಮುಖ್ಯಸ್ಥರಾಗಿ ನೀವು ನಿಮಗೆ ತೋಚಿದಂತೆ ತೀರ್ಮಾನ ತೆಗೆದುಕೊಳ್ಳಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಭೆ ಕರೆದಿರುವುದು ರೈತರ ಅಭಿಪ್ರಾಯ ಕೇಳಲು. ರೈತರು ತಮ್ಮ ಅಭಿಪ್ರಾಯಗಳನ್ನು ಹೇಳಲಿ. ಮಂತ್ರಿಗಳಾಗಿ ಆನಂತರ ನೀವು ನಿಮ್ಮ ಸಲಹೆ ಕೊಡಿ. ಅದನ್ನು ಬಿಟ್ಟು ನೀವೇ ಪ್ರತಿ ಎಕರೆಗೆ ಇಷ್ಟೇ ದುಡ್ಡು ಕೊಡಬೇಕು ಎಂದು ತಾಕೀತು ಮಾಡುವುದು ಸರಿಯಲ್ಲ ಎಂದು ಹೇಳಿದ ಶಿವಕುಮಾರ್ ನಂತರ ರೈತರ ಅಭಿಪ್ರಾಯ ಕೇಳಿದರು.




