ಬೆಂಗಳೂರು: ಚಿತ್ರದುರ್ಗದಿಂದ ಕಾರಿನಲ್ಲಿ ಬೆಂಗಳೂರಿಗೆ ಬಂದು ಮಹಿಳೆಯರ ಸರ ಕಳವು ಸೇರಿದಂತೆ ವಿವಿಧ ರೀತಿಯ ಕಳ್ಳತನ ನಡೆಸಿ ಪರಾರಿಯಾಗುತ್ತಿದ್ದ ಕಳ್ಳರ ತಂಡವನ್ನು ಬೆಂಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಕಳೆದ ಮಾರ್ಚ್ 15ರಂದು ಗೃಹಿಣಿ ಲೀಲಾವತಿ ಬನಶಂಕರಿ ದೇವಸ್ಥಾನಕ್ಕೆ ಹೋಗಿ ಬರುವಾಗ ಅವರ ಕತ್ತಿನಲ್ಲಿದ್ದ 24 ಗ್ರಾಂ ಚಿನ್ನದ ಸರವನ್ನು ಆರೋಪಿಗಳು ಲಪಟಾಯಿಸಿ ಪರಾರಿಯಾಗಿದ್ದರು. ಈ ಬಗ್ಗೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಗೆ ಲೀಲಾವತಿ ದೂರು ನೀಡಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೃತ್ಯ ನಡೆದ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾ ಸೇರಿ ತಾಂತ್ರಿಕ ಕಾರ್ಯಾಚರಣೆ ನಡೆಸಿದಾಗ ಆರೋಪಿಗಳ ಸುಳಿವು ಸಿಕ್ಕಿತ್ತು. ಈ ಸುಳಿವಿನ ಮೇರೆಗೆ 4 ಆರೋಪಿಗಳನ್ನು ಬಂಧಿಸಿದ್ದಾರೆ.
ಚಿತ್ರದುರ್ಗದ ಬಾಬೂಸಾಬ್ (45), ಹುಸೇನ್ ಬೀ (52), ದಾದಾಪೀರ್ (32), ಗುಲಾಬ್ (40) ಬಂಧಿತರು. ಆರೋಪಿಗಳ ಬಂಧನದಿಂದ 6 ಪ್ರಕರಣಗಳು ಪತ್ತೆಯಾಗಿದ್ದು, 11 ಲಕ್ಷ ರೂ. ಬೆಲೆಬಾಳುವ ಒಟ್ಟು 174 ಗ್ರಾಂ ಚಿನ್ನದ ಸರಗಳನ್ನು ಮತ್ತು ಚಿನ್ನದ ಮಾಂಗಲ್ಯ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ.
4 ಆರೋಪಿಗಳು ಚಿತ್ರದುರ್ಗದಿಂದ ತಮ್ಮ ಕಾರಿನಲ್ಲಿ ಬೆಂಗಳೂರು ಸೇರಿ ಊರೂರು ಅಲೆಯುತ್ತಿದ್ದರು. ಅಲ್ಲಿರುವ ಜಾತ್ರಾ ಮಹೋತ್ಸವ, ಜನ ಸಂದಣಿ ಹೆಚ್ಚು ಸೇರುವ ಕಡೆ ಓಡಾಡಿ ಹಿರಿಯ ನಾಗರಿಕರನ್ನು ಟಾರ್ಗೆಟ್ ಮಾಡಿ ಅವರ ಕತ್ತಿನಲ್ಲಿರುವ ಚಿನ್ನದ ಸರ ಲಪಟಾಯಿಸುತ್ತಿದ್ದರು. ನಂತರ ಅದನ್ನು ಮಾರಾಟ ಮಾಡಿ ಬಂದ ದುಡ್ಡಿನಲ್ಲಿ ನಾಲ್ವರೂ ಸಮಾನವಾಗಿ ಹಂಚಿಕೆ ಮಾಡಿಕೊಳ್ಳುತ್ತಿದ್ದರು. ಇದುವರೆಗೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರಲಿಲ್ಲ. ಕೃತ್ಯ ಎಸಗುವ ಸಂಬಂಧ ಚಿತ್ರದುರ್ಗದಿಂದ ಬೇರೆ ಊರುಗಳಿಗೆ ತೆರಳಲೆಂದೇ ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಿದ್ದರು. ಕಾರಿನಲ್ಲಿ ಬಂದು ಕಳ್ಳತನ ಮಾಡಿ ಊರಿಗೆ ಹಿಂತಿರುಗುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.




