ಬೆಂಗಳೂರು: ಕಂಪನಿಯೊಂದರ ಲೋಗೋ ಹಾಗೂ ಎಂ.ಡಿ ಫೋಟೋವನ್ನು ವಾಟ್ಸಾಪ್ ಡಿಪಿಯಲ್ಲಿ ಹಾಕಿ, ನಂಬಿಸಿ ಹಣವನ್ನು ವರ್ಗಾವಣೆ ಮಾಡಿಸಿಕೊಳ್ಳುತ್ತಿದ್ದ ಹೊರ ರಾಜ್ಯದ ಆರು ಸೈಬರ್ ವಂಚಕರನ್ನು ಸಿ.ಇ.ಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಬಿಟಿ.ಎಂ ಲೇಔಟ್ 2ನೇ ಹಂತದ ನಿವಾಸಿಯೊಬ್ಬರು ಸಾಫ್ಟ್ ವೇರ್ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ಕಂಪನಿಯ ಲೋಗೊ ಹಾಗೂ ಎಂ.ಡಿ ಪೋಟೊವನ್ನು ವಾಟ್ಸಾಪ್ ಡಿಪಿಯಲ್ಲಿ ಹಾಕಿಕೊಂಡಿರುವ ವಾಟ್ಸಾಪ್ ನಂಬರ್ನಿಂದ ಕಂಪನಿಯ ಪ್ರೋಜೆಕ್ಟ್ ಆಡ್ವಾನ್ಸ್ ಸೆಕ್ಯೂರಿಟಿ ಡೆಪಾಜಿಟ್ಗಾಗಿ 56,00,100ರೂ. ಹಣವನ್ನು ವರ್ಗಾವಣೆ ಮಾಡಬೇಕಾಗುತ್ತದೆ ಎಂದು ವಾಟ್ಸಾಪ್ ಮೇಸೆಜ್ ಮೂಲಕ ಸಂದೇಶ ಬಂದಿದೆ. ಇದನ್ನು ನಂಬಿದ ಅಕೌಂಟೆಂಟ್ ಹಣವನ್ನು ಕಂಪನಿಯ ಕರೆಂಟ್ ಅಕೌಂಟ್ ನಿಂದ ವ್ಯಾಟ್ಸ್ ಆಪ್ ಮೇಸೆಜ್ ನಲ್ಲಿ ಸೂಚಿಸಿರುವ ಖಾತೆಗೆ ಹಣವನ್ನು ಜಮೆ ಮಾಡಿರುತ್ತಾರೆ.
ಇದಾದ ನಂತರ ವಂಚನೆಗೊಳಗಾಗಿರುವ ಬಗ್ಗೆ ತಿಳಿದು, ತಕ್ಷಣ ಅವರು ಆಗ್ನೇಯ ವಿಭಾಗದ ಸಿ.ಇ.ಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ಸೈಬರ್ ವಂಚಕರ ಬ್ಯಾಂಕ್ ಖಾತೆಗಳ ಮಾಹಿತಿಯನ್ನು ಕಲೆ ಹಾಕಿದಾಗ ಹೈದರಬಾದ್ ಮೂಲದ ಆರೋಪಿಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿರುವುದು ಗೊತ್ತಾಗಿದೆ.
ತಕ್ಷಣ ಹೈದರಾಬಾದ್ ಗೆ ತೆರಳಿದ ಪೊಲೀಸರು ಹಯಾತ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಈ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ಹೇಳಿದ್ದಾನೆ. ಅಲ್ಲದೇ ಇತರೆ ಐವರು ಸಹಚರರಿಗೆ ಹಣವನ್ನು ವರ್ಗಾಯಿಸಿರುವ ಬಗ್ಗೆ ತಿಳಿಸಿದ್ದು, ವರ್ಗಾವಣೆ ಮಾಡಿದ ಹಣವನ್ನು ವಿತ್ ಡ್ರಾ ಮಾಡಿಕೊಟ್ಟರೆ ಕಮಿಷನ್ ನೀಡುವುದಾಗಿ ತಿಳಿಸಿರುತ್ತಾನೆ.
ಆರೋಪಿ ನೀಡಿದ ಮಾಹಿತಿಯ ಮೇರೆಗೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನುಳಿದ 5 ಆರೋಪಿಗಳನ್ನು ಹೈದರಬಾದ್ ನ ನಾರ್ಸಿಂಗೀ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಬಿನಾನ್ಸ್ ಎಂಬ ಅಪ್ಲಿಕೇಷನ್ ನಲ್ಲಿ ಪರಿಚಯರಾದ ಅಪರಿಚಿತ ವ್ಯಕ್ತಿಯು, ನಾವು ನೀಡಿದ ಬ್ಯಾಂಕ್ ಖಾತೆಗಳಿಗೆ ಆರೋಪಿಗಳು ಹಣವನ್ನು ಹಾಕಿರುತ್ತಾರೆ. ಹಣವನ್ನು ವಿತ್ ಡ್ರಾ ಮಾಡಿ, ಯು.ಎಸ್.ಡಿ.ಟಿ ಅನ್ನು ಖರೀದಿ ಮಾಡಿ, ಅಧಿಕ ಬೆಲೆಗೆ ಅದೇ ಅಪರಿಚಿತ ವ್ಯಕ್ತಿಗೆ ಮಾರಾಟ ಮಾಡಿರುವುದಾಗಿ ತಿಳಿಸಿದ್ದಾರೆ.
ಈ ಪೈಕಿ ವಶಕ್ಕೆ ಪಡೆದ ಮೂವರು ಆರೋಪಿಗಳನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಿ ಕೃತ್ಯಕ್ಕೆ ಉಪಯೋಗಿಸಿದ 1 ಮೊಬೈಲ್ ಫೋನ್ ಹಾಗೂ ವಂಚಿಸಿದ್ದ ಹಣದಿಂದ ಖರೀದಿ ಮಾಡಿದ್ದ ಕಾರು ಮತ್ತು 58,600ರೂ. ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಬ್ಯಾಂಕ್ ಖಾತೆಗಳನ್ನು ಲೀನ್ ಮಾಡಿ, ಅದರಲ್ಲಿದ್ದ 5 ಲಕ್ಷ ಹಣವನ್ನು ಕಂಪನಿಯ ಖಾತೆಗೆ ಹಿಂದಿರುಗಿಸಲಾಗಿದೆ. ಸಿ.ಇ.ಎನ್ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಈಶ್ವರಿ ಮತ್ತು ಸಿಬ್ಬಂದಿ ತಂಡ ಪ್ರಕರಣ ಪತ್ತೆಮಾಡುವಲ್ಲಿ ಯಶಸ್ವಿಯಾಗಿದೆ.


