ಬೆಂಗಳೂರು: ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸ್ ಸಿಬ್ಬಂದಿ ಎಂದು ಹೇಳಿಕೊಂಡು ಬಾಂಗ್ಲಾ ಪ್ರಜೆಗಳಿಂದ ಹಣ ವಸೂಲಿ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಬೆಂಗಳೂರು ಗ್ರಾಮಾಂತರ ಪೊಲೀಸ್ ವಿಭಾಗದ ಕಾನ್ಸ್ಟೇಬಲ್ ಪ್ರಶಾಂತ್ ನಾವಿ ಹಾಗೂ ಮತ್ತೋರ್ವ ಖಾಸಗಿ ವ್ಯಕ್ತಿ ನಾಸೀರ್ ಖಾನ್ ಬಂಧಿತ ಆರೋಪಿಗಳಾಗಿದ್ದಾರೆ.ಬಂಧಿತರನ್ನು ತೀವ್ರ ವಿಚಾರಣೆ ನಡೆಸಲಾಗಿದೆ.
ಈ ಹಿಂದೆ ರಾಜ್ಯ ಆಂತರಿಕ ಭದ್ರತಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ನಾವಿಯನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಮಾಡಲಾಗಿತ್ತು. ಅಮಾನತು ರದ್ದಾದ ಬಳಿಕ ಬೆಂಗಳೂರು ಗ್ರಾಮಾಂತರ ಪೊಲೀಸ್ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿತ್ತು. ಈ ವೇಳೆ ಆತ ಅಪರಾಧಿಕ ಹಿನ್ನೆಲೆಯ ನಾಸೀರ್ ಖಾನ್ ಜೊತೆ ಕೈಜೋಡಿಸಿದ್ದ.
ಈತನೊಂದಿಗೆ ಸೇರಿ ಕಸ ಸಂಗ್ರಹಣೆ ಮಾಡುವ ಬಾಂಗ್ಲಾ ಪ್ರಜೆಗಳನ್ನು ಗುರಿಯಾಗಿಸಿಕೊಂಡ ಆರೋಪಿಗಳು, ಅವರನ್ನು ಬಂಧಿಸುವ ಬೆದರಿಕೆ ಹಾಕಿ ಹಣ ವಸೂಲಿ ಮಾಡುತ್ತಿದ್ದರು. ಕೆಲವರನ್ನ ಬಂಧನದ ನೆಪದಲ್ಲಿ ಕರೆದೊಯ್ದು, ಹಣ ವಸೂಲಿ ಮಾಡಿರುವುದು ಸಹ ತನಿಖೆ ಸಂದರ್ಭದಲ್ಲಿ ಕಂಡು ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.




