ಬೆಂಗಳೂರು: ಚಿತ್ರದುರ್ಗದ ವಸತಿ ನಿಲಯದ ಪದವಿ ವಿದ್ಯಾರ್ಥಿನಿಯ ಬರ್ಬರ ಕೊಲೆ ಪ್ರಕರಣದ ಆರೋಪಿಗಳನ್ನು ಮುಲಾಜಿಲ್ಲದೇ ಬಂಧಿಸಿ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿಧಾನಪರಿಷತ್ ನಲ್ಲಿ ತಿಳಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಬಿಜೆಪಿ ಸದಸ್ಯ ನವೀನಕುಮಾರ ಸೇರಿ ಇನ್ನಿತರರು ಚಿತ್ರದುರ್ಗದಲ್ಲಿ ನಡೆದ ಪದವಿ ವಿದ್ಯಾರ್ಥಿನಿಯ ಬರ್ಬರ ಕೊಲೆ ಕೃತ್ಯವನ್ನು ಪ್ರಸ್ತಾಪಿಸಿದರು.
ಈ ರೀತಿಯ ಘಟನೆಯಿಂದ ಭಯದ ವಾತಾವರಣ ನಿರ್ಮಾಣವಾಗಿದೆ. ಹಾಸ್ಟೆಲ್ಗೂ ಕಳುಹಿಸಲು ಭಯಪಡುವಂತಾಗಿದೆ, ಸರ್ಕಾರ ಈ ರೀತಿಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು, ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಜೊತೆಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ, ಈ ಘಟನೆ ಸಂಬಂಧ ಆರೋಪಿಗಳ ಮೇಲೆ ನಿರ್ದಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುವುದು. ಇಂತಹ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂದರು.




