ಬೆಂಗಳೂರು: ಹಸಿರು ಜಾಗೃತಿ ಮಾಸದ ಅಂಗವಾಗಿ ಕಳೆದ ಒಂದು ತಿಂಗಳಿನಿಂದ ಬ್ಯಾಟರಾಯನಪುರ ಕ್ಷೇತ್ರದ ಎಲ್ಲಾ ಕೆರೆ ಪ್ರದೇಶಗಳಲ್ಲಿ ನೂರಾರು ಸಸಿಗಳನ್ನು ನೆಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈತೇಗೌಡ ಮಾಹಿತಿ ನೀಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಒಟ್ಟಾರೆ 50,000 ಸಸಿಗಳನ್ನು ನೆಡುವ ಗುರಿ ಹೊಂದಲಾಗಿದ್ದು, ಇಂದು ವೆಂಕಟೇಶಪುರ ಕೆರೆ ಪ್ರದೇಶದಲ್ಲಿ ನೆರೆದಿದ್ದ ನೂರಾರು ಸಂಖ್ಯೆಯ ಸಾರ್ವಜನಿಕರ ಮಕ್ಕಳ ಸಹಾಯದಿಂದ ಸಸಿ ನೆಡಲಾಯಿತು ಎಂದಿದ್ದಾರೆ.
ಪರಿಸರ ಹಾಗೂ ಜೈವಿಕ ಸಮತೋಲನದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು ಹೆಚ್ಚಿನ ಸಂಖ್ಯೆಯ ಮಕ್ಕಳು ಭಾಗವಹಿಸಿದ್ದು ಸಂತೋಷದ ವಿಷಯವಾಗಿದೆ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ಕೆರೆ ಅಭಿವೃದ್ಧಿ ಕಾರ್ಯದ ಬಗ್ಗೆಯೂ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳ ಬಳಿ ಸ್ಥಳದಲ್ಲೇ ಮಾಹಿತಿ ಪಡೆದರು.











