ಬೆಂಗಳೂರು: ಹಸಿರು ಜಾಗೃತಿ ಮಾಸದ ಅಂಗವಾಗಿ ಕಳೆದ ಒಂದು ತಿಂಗಳಿನಿಂದ ಬ್ಯಾಟರಾಯನಪುರ ಕ್ಷೇತ್ರದ ಎಲ್ಲಾ ಕೆರೆ ಪ್ರದೇಶಗಳಲ್ಲಿ ನೂರಾರು ಸಸಿಗಳನ್ನು ನೆಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈತೇಗೌಡ ಮಾಹಿತಿ ನೀಡಿದ್ದಾರೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಒಟ್ಟಾರೆ 50,000 ಸಸಿಗಳನ್ನು ನೆಡುವ ಗುರಿ ಹೊಂದಲಾಗಿದ್ದು, ಇಂದು ವೆಂಕಟೇಶಪುರ ಕೆರೆ ಪ್ರದೇಶದಲ್ಲಿ ನೆರೆದಿದ್ದ ನೂರಾರು ಸಂಖ್ಯೆಯ ಸಾರ್ವಜನಿಕರ ಮಕ್ಕಳ ಸಹಾಯದಿಂದ ಸಸಿ ನೆಡಲಾಯಿತು ಎಂದಿದ್ದಾರೆ.
ಪರಿಸರ ಹಾಗೂ ಜೈವಿಕ ಸಮತೋಲನದ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದ್ದು ಹೆಚ್ಚಿನ ಸಂಖ್ಯೆಯ ಮಕ್ಕಳು ಭಾಗವಹಿಸಿದ್ದು ಸಂತೋಷದ ವಿಷಯವಾಗಿದೆ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ಕೆರೆ ಅಭಿವೃದ್ಧಿ ಕಾರ್ಯದ ಬಗ್ಗೆಯೂ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳ ಬಳಿ ಸ್ಥಳದಲ್ಲೇ ಮಾಹಿತಿ ಪಡೆದರು.










