ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಹಿಂದೂ ಧರ್ಮೀಯರ ಮೇಲೆ ಹಾಗೂ ಹಿಂದೂ ದೇವಾಲಯಗಳ ಮೇಲೆ ದಾಳಿ ನಿತ್ಯ ನಿರಂತರ ಎಂದು ಬಿಜೆಪಿ ಆರೋಪಿಸಿದೆ.
- ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ: ಸಿದ್ದರಾಮಯ್ಯ
- ಉನ್ನತ ಮಟ್ಟದ ಪರಿಶೀಲನಾ ಸಮಿತಿಗೆ ಪತ್ರ ಬರೆದ ಪ್ರತಿಪಕ್ಷ ನಾಯಕ ಆರ್.ಅಶೋಕ
- ಕಸಾಪಗೆ ಕಪ್ಪುಚುಕ್ಕೆ ಇಟ್ಟವರು ನಾಲ್ವಡಿಯವರಿಗೆ ಬಗೆದ ದ್ರೋಹ
- ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳ ಪಟ್ಟಿ
- ಕನ್ನಡ ಪರ ನೀತಿ ನಿರೂಪಣೆ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸುವ ನಿಟ್ಟಿನಲ್ಲಿ ಸಿದ್ಧತೆ
ಕಲ್ಲೇಶ್ವರ ಸ್ವಾಮಿಯ ರಥಕ್ಕೆ ಬೆಂಕಿ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ ಬಿಜೆಪಿ, ಮತಾಂಧ ಖಿಲ್ಜಿ, ಘಜ್ನಿ, ಘೋರಿ ಕಾಲದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದ ಮಾದರಿಯಲ್ಲಿ ತುಮಕೂರಿನ ಗುಬ್ಬಿಯ ನಿಟ್ಟೂರುಪುರದ 800 ವರ್ಷಗಳ ಇತಿಹಾಸ ಹೊಂದಿರುವ ಕಲ್ಲೇಶ್ವರ ಸ್ವಾಮಿಯ ರಥಕ್ಕೆ ಮಟ ಮಟ ಮಧ್ಯಾಹ್ನವೇ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎಂದು ಆರೋಪಿಸಿದೆ.
ಸಿಎಂ ಸಿದ್ದರಾಮಯ್ಯ ಅವರೇ, ಇದು ನಿಮ್ಮ ಓಲೈಕೆ ಹಾಗೂ ಅರಾಜಕತೆಯ ಆಡಳಿತದ ದುಷ್ಪರಿಣಾಮ. ಹಿಂದೂ ಧರ್ಮ, ಹಿಂದೂ ದೇವಾಲಯ, ಹಿಂದೂಗಳ ಮೇಲಿನ ನಿಮಗೇಕೆ ಈ ಪರಿ ಅಸಡ್ಡೆ. ಹಿಂದೂಗಳಿಗೆ ನಿಮ್ಮ ಆಡಳಿತದಲ್ಲಿ ರಕ್ಷಣೆ ಇಲ್ಲವೇ? ಎಂದು ಪ್ರಶ್ನಿಸಿದೆ.




