ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಸ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು BJP ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಇಂದಿನ ಸಂಸದ ಬೊಮ್ಮಾಯಿ. ಇಂದು ಸುಹಾಸ್ನನ್ನು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು.?
ಕರಾವಳಿಯನ್ನು ಕೋಮು ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್ಗಳ ನಿಜವಾದ ಸೃಷ್ಟಿಕರ್ತರು. ಇವರು ಅಧಿಕಾರದಲ್ಲಿದ್ದಾಗ ಕ್ರಿಮಿನಲ್ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್ಗಳನ್ನು ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ ಮಾಡುತ್ತಾರೆ.
ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ರಾಜ್ಯ ಬಿಜೆಪಿ ನಾಯಕರ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ ಧರ್ಮಾಂಧತೆಗೆ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ.?
ಬಿಜೆಪಿಯವರ ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ ಬಲಿಯಾಗಿದೆ. ಎಷ್ಟೋ ಮನೆಗಳ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ದುಷ್ಟ ರಾಜಕಾರಣ ಮಾಡುತ್ತಿದ್ದಾರೆ.
ದ.ಕನ್ನಡದ ಜನ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ ಬಿಜೆಪಿಯವರ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ ನೆಮ್ಮದಿಯೇ ಹಾಳಾಗಲಿದೆ.
– ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ




