ದೆಹಲಿ: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ನ್ಯಾ. ಸೂರ್ಯಕಾಂತ್ ಮತ್ತು ನ್ಯಾ. ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ. ಕೇಜ್ರಿವಾಲ್ ಮತ್ತು ಸಿಬಿಐ ಪರ ವಕೀಲರ ವಾದಗಳನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5 ರಂದು ತೀರ್ಪನ್ನು ಕಾಯ್ದಿರಿಸಿತ್ತು.
- ರಾಜಕೀಯ ಪ್ರೇರಣೆಗೆ ಬಲಿಯಾಗದೆ ಸತ್ಯ ಅರಿಯಬೇಕು: ಪ್ರಿಯಾಂಕ್ ಖರ್ಗೆ
- ಕುವೆಂಪು ವಿವಿಯಲ್ಲಿ ಪಿಎಚ್ಡಿ ಪೂರೈಸಿದ ಐಜಿಪಿ ಹರ್ಷ ಪಿ.ಎಸ್.
- ಬಿಜೆಪಿ ನಾಯಕನಿಂದ ‘ಹಾಸಿಗೆ ಹಂಚಿಕೊಂಡರೆ ಪದವಿ’ ಆಮಿಷ
- 53 ಸೆಕೆಂಡ್ ಗಳಲ್ಲಿ 9 ಬಾರಿ ಪೋಷಕಿಗೆ ‘Shut Up’ ಎಂದು ಕಿರುಚಾಡಿದ ಪ್ರಾಂಶುಪಾಲೆ
- ವಿಳಂಬ ನೀತಿ ಭ್ರಷ್ಟಾಚಾರಕ್ಕೆ ಎಡೆಮಾಡಿಕೊಡುತ್ತದೆ: ಸಿದ್ದರಾಮಯ್ಯ
ಪ್ರಕರಣದ ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯದ ಮೊರೆ ಹೋಗದಿರುವುದಕ್ಕೆ ಕೇಜ್ರಿವಾಲ್ ವಿರುದ್ಧ ಆಕ್ಷೇಪಿಸಿದ್ದರು. ಕೇಜ್ರಿವಾಲ್ ನೇರವಾಗಿ ಜಾಮೀನಿಗಾಗಿ ದೆಹಲಿ ಹೈಕೋರ್ಟ್ಗೆ ಮೊರೆ ಹೋಗಿದ್ದರು ಮತ್ತು ನಂತರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿ ಕಾನೂನು ಹೋರಾಟ ಮುನ್ನಡೆಸಿದ್ದರು.
ಇದೀಗ ರದ್ದುಗೊಳಿಸಲಾಗಿರುವ ದೆಹಲಿ ಅಬಕಾರಿ ನೀತಿ 2021-22 ರಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21, 2024 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಜೂನ್ 26 ರಂದು ಅಬಕಾರಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿದ್ದಾಗ ಸಿಬಿಐ ಅವರನ್ನು ಬಂಧಿಸಿತ್ತು.
ದೆಹಲಿಯ ಅಬಕಾರಿ ನೀತಿ ಪ್ರಕರಣವೇನು?: ದೆಹಲಿ ಸರ್ಕಾರ 2021-22 ರಲ್ಲಿ ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪುನಶ್ಚೇತನಗೊಳಿಸುವ ಉದ್ದೇಶದಿಂದ ಮಾರಾಟ, ಪರಿಮಾಣ, ಆಧಾರಿತ ಆಡಳಿತವನ್ನು ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದೊಂದಿಗೆ ಬದಲಾಯಿಸುವ ಗುರಿ ಹೊಂದಿತ್ತು. ಅಂತಿಮವಾಗಿ ಗ್ರಾಹಕರಿಗೆ ಲಾಭ ಮಾಡುವ ಉದ್ದೇಶ ಹೊಂದಿರುವುದಾಗಿ ಹೇಳಲಾಗಿತ್ತು.
ಆದರೆ, ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ ನಂತರ ನೀತಿಯನ್ನು ರದ್ದುಗೊಳಿಸಲಾಯಿತು.
ಇಡಿ ಪ್ರಕಾರ, ಅಬಕಾರಿ ನೀತಿಯನ್ನು ಅಂತಿಮಗೊಳಿಸಲು ಕೇಜ್ರಿವಾಲ್ ನೇತೃತ್ವದ ಎಎಪಿ ₹ 100 ಕೋಟಿಗಳಷ್ಟು ಕಿಕ್ಬ್ಯಾಕ್ ಪಡೆದಿದೆ. ಈ ಹಣದ ದೊಡ್ಡ ಭಾಗವನ್ನು ಪಕ್ಷ ತನ್ನ ಗೋವಾ ಚುನಾವಣಾ ಪ್ರಚಾರದಲ್ಲಿ ಬಳಸಿಕೊಂಡಿದೆ ಎಂಬ ಆರೋಪ ಕೇಳಿಬಂದಿತ್ತು.




