ಧಾರವಾಡ: ಸಾರ್ವತ್ರಿಕ ಲೋಕಸಭಾ ಚುನಾವಣೆ ದಿನಾಂಕ ನಿಗದಿಪಡಿಸಿ ಭಾರತ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಈಗಾಗಲೇ ಮಾದರಿ ನೀತಿ ಸಂಹಿತೆ ಮಾರ್ಚ್ 16 ರಿಂದ ಜಾರಿಯಲ್ಲಿದೆ. ಯಾವುದೇ ದಾರ್ಮಿಕ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ನಡೆಸುವುದನ್ನು ಪ್ರಜಾಪ್ರತಿನಿಧಿ ಕಾಯ್ದೆಯ ಪ್ರಕಾರ ನಿಷೇಧಿಸಲಾಗಿದೆ ಎಂದು ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇವಾಲಯ ಮಂದಿರ, ಚರ್ಚ್, ಮಸೀದಿ ಹಾಗೂ ಪ್ರಾರ್ಥನಾ ಸ್ಥಳಗಳಲ್ಲಿ ರಾಜಕೀಯ ಪಕ್ಷಗಳು ಹಾಗೂ ಪಕ್ಷದ ಕಾರ್ಯಕರ್ತರು ಪ್ರಚಾರ ನಡೆಸುವುದನ್ನು ನಿಷೇಧಿಸಲಾಗಿದೆ. ಮೇಲೆ ಹೇಳಲಾದ ಸ್ಥಳಗಳನ್ನು ಚುನಾವಣಾ ಪ್ರಚಾರಕ್ಕೆ ಬಳಸಿದಲ್ಲಿ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.




