ಬಳ್ಳಾರಿ: ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಅಂಗವಾಗಿ ಶಾಂತಿಯುತ ಹಾಗೂ ಮುಕ್ತ ರೀತಿಯಾಗಿ ನಡೆಸುವ ನಿಟ್ಟಿನಲ್ಲಿ ಜಿಲ್ಲೆಯ ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಗೆ ಒಳಪಡುವ ಎಲ್ಲಾ ದೇವಸ್ಥಾನ, ಮಠ, ಧಾರ್ಮಿಕ ಸಂಸ್ಥೆಗಳು ಹಾಗೂ ಧಾರ್ಮಿಕ ಸ್ಥಳಗಲ್ಲಿ ರಾಜಕೀಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಹೆಚ್.ಗಂಗಾಧರ್ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಹಿಂದೂ ಧಾರ್ಮಿಕ ಸಂಸ್ಥೆ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನ, ಮಠ, ಮಂದಿರ, ಜೈನ್ ಬಸದಿಗಳು ಹಾಗೂ ಇವುಗಳ ವ್ಯಾಪ್ತಿಗೆ ಒಳಪಡುವ ಭವನ, ಯಾತ್ರಿ ನಿವಾಸ ಪ್ರದೇಶ, ಕಲ್ಯಾಣ ಮಂಟಪಗಳಲ್ಲಿ ಸಭೆ, ಸಮಾರಂಭ ಅಥವಾ ಇನ್ನೀತರೆ ರಾಜಕೀಯ ಚಟುವಟಿಕೆಗಳ ಆಯೋಜನೆಗೆ ಅನುಮತಿ ಇರುವುದಿಲ್ಲ.
ನಿಬಂಧನೆಗಳು:
- ರಾಜಕೀಯ ಚಟುವಟಿಕೆಗಳಿಗೆ ದೇವಸ್ಥಾನದ ಕೊಠಡಿಗಳು, ಕಲ್ಯಾಣ ಮಂಟಪ, ಸಮುದಾಯದ ಭವನ, ಖಾಲಿ ಜಾಗ, ದೇವಸ್ಥಾನದ ಆವರಣ, ಇತರೆ ಧಾರ್ಮಿಕ ಸ್ಥಳಗಳನ್ನು ನೀಡಲು ಅವಕಾಶ ಇರುವುದಿಲ್ಲ. ದೇವಸ್ಥಾನಗಳಲ್ಲಿ ವ್ಯಕ್ತಿಗಳು ಯಾವುದೇ ಸಮಾರಂಭ, ಸಭೆ, ಇನ್ನಿತರೆ ರಾಜಕೀಯ ಚಟುವಟಿಕೆಗಳು ನಡೆಸುವಂತಿಲ್ಲ.
- ದೇವಸ್ಥಾನ ಆವರಣದಲ್ಲಿ ರಾಜಕೀಯ ವ್ಯಕ್ತಿಗಳಿಂದ ಅನವಶ್ಯಕ ಕಾರ್ಯಕ್ರಮದ ಆಯೋಜನೆಯಲ್ಲಿ ಊಟದ ವ್ಯವಸ್ಥೆ ಮಾಡುವಂತಿಲ್ಲ. ದೇವಸ್ಥಾನ ಧ್ವನಿವರ್ಧಕಗಳನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸುವಂತಿಲ್ಲ.




