ದಾವಣಗೆರೆ: ಪ್ಲಾಸ್ಟಿಕ್ ಕಪ್, ಹಾಳೆ, ಗುಟ್ಕಾ, ಹಾಗೂ ಸಿಗರೇಟ್ಗಳ ಮಾರಾಟ ನಿಷೇಧಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುವ ಬೀದಿಬದಿ ವ್ಯಾಪಾರಿಗಳು ಈ ಹಿಂದೆ ಪಾಲಿಕೆಯಿಂದ ನೋಂದಾಯಿಸಲ್ಪಟ್ಟ, ನೋಂದಣಿ ಮಾಡಿಸದೇ ಇರುವ ಬೀದಿಬದಿ ವ್ಯಾಪಾರಿಗಳು ನಗರದ ರಸ್ತೆ ಬದಿಗಳಲ್ಲಿ ಸಾರ್ವಜನಿಕರಿಗೆ, ವಾಹನ ಸಂಚಾರಕ್ಕೆ ರಸ್ತೆಗಳ ಸ್ವಚ್ಛತೆಗೆ ತೊಂದರೆಯಾಗುವಂತೆ ತಳ್ಳುವಗಾಡಿಗಳಲ್ಲಿ ಚಹಾ, ತಿಂಡಿ, ಪ್ಲಾಸ್ಟಿಕ್ ಕಪ್, ಗುಟ್ಕಾ, ಸಿಗರೇಟ್ ಗಳ ಮಾರಾಟ ಮಾಡುತ್ತಿದ್ದು, ಅದರಿಂದ ಉತ್ಪತ್ತಿಯಾದ ತ್ಯಾಜ್ಯಗಳನ್ನು ರಸ್ತೆ, ಚರಂಡಿ, ಖಾಲಿನಿವೇಶನಗಳಲ್ಲಿ ಹಾಕಿ ಸುಡುತ್ತಿರುವುದು ಕಂಡುಬಂದಿರುತ್ತದೆ ಎಂದಿದ್ದಾರೆ.
ಇದರಿಂದಾಗಿ ಚರಂಡಿಗಳು ಬ್ಲಾಕ್ ಆಗಿ ಸೊಳ್ಳೆಗಳ ಸಂತಾನೋತ್ಪತ್ತಿಗೆ ಕಾರಣವಾಗುವುದಲ್ಲದೇ, ವಾಯುಮಾಲಿನ್ಯಕ್ಕೂ ಕಾರಣವಾಗಿರುತ್ತದೆ. ಆದ್ದರಿಂದ ಎಲ್ಲಾ ಬೀದಿಬದಿ ವ್ಯಾಪಾರಿಗಳು ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಟರಿಣಾಮ ಬೀರುವಂತಹ ಪ್ಲಾಸ್ಟಿಕ್ ಹಾಳೆಗಳು, ಪ್ಲಾಸ್ಟಿಕ್ ಕಪ್, ಗುಟ್ಕಾ, ಸಿಗರೇಟ್ಗಳ ಮಾರಾಟ ಮಾಡದಂತೆ ಹಾಗೂ ಕಸವನ್ನು ಹೊರಗಡೆ ಚೆಲ್ಲಿ ಸುಡದಂತೆ ಎರಡು ತ್ಯಾಜ್ಯ ಸಂಗ್ರಾಹಕಗಳನ್ನಿರಿಸಿ, ತ್ಯಾಜ್ಯವನ್ನು ನಿಗದಿತ ತ್ಯಾಜ್ಯ ಸಂಗ್ರಹಕಾರರಿಗೆ ಬಳಕೆದಾರರ ಶುಲ್ಕ ಪಾವತಿಸಿ ನೀಡಬೇಕು ಎಂದು ಸೂಚಿಸಲಾಗಿದೆ ಎಂದಿದ್ದಾರೆ.
ಒಂದು ವೇಳೆ ಸೂಚನೆಗಳನ್ನು ಉಲ್ಲಂಘಿಸಿ ನಗರ ಸ್ವಚ್ಛತೆಗೆ ಧಕ್ಕೆಯುಂಟು ಮಾಡುವುದು ಕಂಡುಬಂದಲ್ಲಿ ದಂಡ ವಿಧಿಸುವುದರೊಂದಿಗೆ ತೆರವುಗೊಳಿಸಲು ಕ್ರಮವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.




