ಬೆಂಗಳೂರು/ಹಾಸನ: ಉದ್ಯೋಗ ಸೇರಿದಂತೆ ವಿವಿಧ ಕಾರಣಕ್ಕಾಗಿ ಬಾಂಗ್ಲಾದೇಶದ ವಲಸಿಗರು ಅಕ್ರಮವಾಗಿ ದೇಶದೊಳಗೆ ನುಸುಳಿ ರಾಜ್ಯದ ಕೆಲವು ಕಡೆ ನೆಲೆಸಿರುವ ಬಗ್ಗೆ ಮಾಹಿತಿಗಳು ಹೊರಬಂದಿದ್ದು ಆತಂಕ ಮೂಡಿಸಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಅದರಲ್ಲೂ ಕಾಫಿ ತೋಟಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಈ ವಲಸೆಗರು ಕೂಲಿ ಕಾರ್ಮಿಕರಾಗಿ ಸೇರಿಕೊಂಡು ಕೆಲಸ ಮಾಡುತ್ತಿದ್ದಾರೆ ಎಂಬ ಮಾಹಿತಿ ಗುಪ್ತದಳವನ್ನು ತಲುಪಿದೆ.
ಅದರಂತೆ ಹಾಸನದಲ್ಲಿ ಆಸ್ಸಾಂ ರಾಜ್ಯದ ಮೂಲದವರೆಂದು ಹೇಳಿಕೊಂಡು ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಜಿಲ್ಲೆಯಲ್ಲಿ ನೆಲೆಸಿರುವ ಸಂಬಂಧ ಪೊಲೀಸರು ಮಾಹಿತಿ ಕಲೆ ಕಲೆಹಾಕುತ್ತಿದ್ದಾರೆ.
ಕೂಲಿ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದೇಶದಿಂದ ಬರುವ ಅಕ್ರಮ ವಲಸಿಗರು ಜಿಲ್ಲೆಯ ಆಲೂರು, ಬೇಲೂರು, ಸಕಲೇಶಪುರ, ಅರಕಲಗೂಡು ಭಾಗದಲ್ಲಿ ನೆಲಸಿದ್ದಾರೆ. ಅರಕಲಗೂಡು ತಾಲೂಕಿನ ವಿವಿಧೆಡೆ ಹೆಚ್ಚಿನ ಸಂಖ್ಯೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರು ಇದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ತಾವು ಅಸ್ಸಾಂ ಮೂಲದವರೆಂದು ನಕಲಿ ಆಧಾರ್ ಕಾರ್ಡ್ ತೋರಿಸಿ, ವಿವಿಧೆಡೆ ಕೆಲಸಕ್ಕೆ ಸೇರಿಸಿಕೊಂಡಿದ್ದಾರೆ. ಆದರೆ, ಕೆಲ ಮಾಲೀಕರು ಯಾವುದೇ ದಾಖಲೆ ಪರಿಶೀಲನೆ ಮಾಡದೆ ಕಾರ್ಮಿಕರ ಅನಿವಾರ್ಯತೆ ಹೆಸರಿನಲ್ಲಿ ಕೆಲಸ ನೀಡುತ್ತಿದ್ದಾರೆ ಎಂದು ಸ್ಥಳೀಯರು ಹೇಳುತ್ತಾರೆ.
ಜಿಲ್ಲೆಯಲ್ಲಿ ಕಾರ್ಮಿಕರ ಕೊರತೆ ಉದ್ಭವಿಸಿದೆ. ಹೀಗಾಗಿ, ಕೆಲ ಏಜೆಂಟರು ಬಾಂಗ್ಲಾದೇಶದ ಜನರನ್ನು ಕರೆತಂದು, ಇಲ್ಲಿ, ಅವರ ಹೆಸರಿನಲ್ಲಿ ಆಸ್ಸಾಂ ರಾಜ್ಯದ ನಿವಾಸಿ ಅಂತ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ್ದಾರೆ. 5 ರಿಂದ 10 ಸಾವಿರ ಹಣ ಪಡೆದು ನಕಲಿ ಆಧಾರ್ ಕಾರ್ಡ್ ಸೃಷ್ಟಿ ಮಾಡುತ್ತಿರುದ್ದಾರೆ. ಈ ನಕಲಿ ಆಧಾರ್ ಕಾರ್ಡ್ ಗಳನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲೇ ವಿತರಿಸಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ನಕಲಿ ದಾಖಲೆ ಮೂಲಕ ಅಕ್ರಮವಾಗಿ ವಲಸಿಗರು ಬರುತ್ತಿರುವ ಬಗ್ಗೆ ಬೆಂಗಳೂರು ವಿಭಾಗದ ಆಧಾರ್ ವಿತರಣೆ ಸಂಸ್ಥೆ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಈ ಸಂಬಂಧ ಅಧಿಕಾರಿಗಳು ಪರಿಶೀಲನೆಗೆ ಇಳಿದರು. ಪರಿಶೀಲನೆ ವೇಳೆ ಒಂದೇ ದಾಖಲೆ ಬಳಸಿ ದಿನಾಂಕ, ಹೆಸರು ತಿದ್ದಿ ಹತ್ತಾರು ಆಧಾರ್ ಕಾರ್ಡ್ ವಿತರಣೆ ಮಾಡಲಾಗಿದೆ. ಆಧಾರ್ ಕಾರ್ಡ್ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಾಗ ಯಾವುದೇ ಮಾಹಿತಿ ದೊರೆಯದಿದ್ದಾಗ ಅನುಮಾನ ಗಾಢವಾಗಿದೆ. ಗಂಡು, ಹೆಣ್ಣು ಕಲಂನಲ್ಲೂ ತಪ್ಪು ಮಾಹಿತಿಗಳು ನಮೂದಿಸಿರುವುದು ಬಯಲಾಗಿದೆ.
ಅಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಯ ಆಧಾರ್ ಕೇಂದ್ರದಲ್ಲಿ ಕೆಲಸ ಮಾಡುವ ಸಿಬ್ಬಂದಿ ಅನುಶ್ರೀಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.




