ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ ಅವರು, 45 ವರ್ಷಗಳ ಕಾಲ ನಿರಂತರವಾಗಿ ವಿಧಾನ ಪರಿಷತ್ತಿನಲ್ಲಿ ಸೇವೆ ಸಲ್ಲಿಸುವ ಮೂಲಕ ವಿಶಿಷ್ಟ ದಾಖಲೆ ಮಾಡಿರುವ ಈ ಸಂದರ್ಭದಲ್ಲಿ ತಮಗೆ ನನ್ನ ಹಾರ್ದಿಕ ಶುಭಾಶಯಗಳು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಕರ್ನಾಟಕವಷ್ಟೇ ಅಲ್ಲದೇ, ಇಡೀ ದೇಶದ ರಾಜಕೀಯ ಕ್ಷೇತ್ರದಲ್ಲಿನ ಅಪರೂಪದ ಸಾಧನೆ ನಿಮ್ಮದಾಗಿದೆ. 1980ರ ದಶಕದಿಂದಲೇ ಶಿಕ್ಷಕರ ಧ್ವನಿಯಾಗಿ, ಶಿಕ್ಷಣ ಕ್ಷೇತ್ರದ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ತಾವು ರಾಜ್ಯ ರಾಜಕಾರಣದಲ್ಲಿ ಅತ್ಯಂತ ಸಂವೇದನಶೀಲ ಗುಣಗಳನ್ನು ಹೊಂದಿರುವ ಕೆಲವೇ ರಾಜಕಾರಣಿಗಳಲ್ಲಿ ಒಬ್ಬರು.
ಶಿಕ್ಷಕರ ಹಿತಾಸಕ್ತಿಗಾಗಿ ಹೋರಾಟ ನಡೆಸಿ, ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ತರಲು ನಿಮ್ಮ ಪರಿಶ್ರಮ ಇತರ ಎಲ್ಲಾ ಕ್ಷೇತ್ರಗಳ ಪ್ರಗತಿಗಾಗಿ ಶ್ರಮಿಸುತ್ತಿರುವ ಎಲ್ಲರಿಗೂ ಅನುಕರಣೀಯ.
ವಿಧಾನ ಪರಿಷತ್ ತಮ್ಮ ಸುದೀರ್ಘ ಸೇವೆ ಲಿಮ್ಕಾ ಬುಕ್ ದಾಖಲೆಯಲ್ಲಿ ಸೇರಿರುವುದು ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆ ಎಂದು ನಾನು ಭಾವಿಸುತ್ತೇನೆ.
ತಮ್ಮ ಶ್ರಮದ ಬದುಕು, ಸಾರ್ಥಕ ಸಾಧನೆಗಳು ಈ ನಾಡಿನ ಯುವ ಜನರಿಗೆ ಸ್ಪೂರ್ತಿಯಾಗಲಿ ಎಂದು ಆಶಿಸುತ್ತಾ ತಮಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತಿದ್ದೇನೆ.
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ




