ಮಹಾನಗರ ಪಾಲಿಕೆಯಿಂದ ಸೂಚನೆ
ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಖಾಲಿ ನಿವೇಶನಗಳ ಮಾಲೀಕರು ತಮ್ಮ ನಿವೇಶನಗಳಲ್ಲಿ ಹಾಗೂ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳು ಅಭಿವೃದ್ಧಿಯಾಗುತ್ತಿದ್ದು, ಡೆಂಗ್ಯೂ ಪ್ರಕರಣಗಳ ಹೆಚ್ಚಳಕ್ಕೆ ಕಾರಣವಾಗಿರುತ್ತದೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ನಿವೇಶನ ಮಾಲೀಕರು ತಮ್ಮ ಜವಾಬ್ದಾರಿ ಅರಿತು, ನೀರು ನಿಲ್ಲದಂತೆ ಮತ್ತು ಸೊಳ್ಳೆಗಳು ಅಭಿವೃದ್ಧಿಯಾಗದಂತೆ ನಿವೇಶನಗಳನ್ನು ಸ್ವಚ್ಛಗೊಳಿಸಿಕೊಳ್ಳಲು ಸೂಚಿಸಲಾಗಿದೆ.
ಒಂದು ವೇಳೆ ಖಾಲಿ ನಿವೇಶನ, ಕಟ್ಟಡ ನಿರ್ಮಾಣ ಹಂತದಲ್ಲಿನ ನಿವೇಶನಗಳಲ್ಲಿ ನೀರು ನಿಂತು ಸೊಳ್ಳೆ ಲಾರ್ವಾಗಳು ಕಂಡುಬಂದಲ್ಲಿ ಮಹಾನಗರ ಪಾಲಿಕೆಯಿಂದ ದಂಡ ವಿಧಿಸುವುದರೊಂದಿಗೆ ನಿವೇಶನ ಸ್ವಚ್ಛಗೊಳಿಸಿ ಇದಕ್ಕೆ ತಗುಲುವ ವೆಚ್ಚವನ್ನು ಆಸ್ತಿತೆರಿಗೆ ಬಾಕಿ ರೂಪದಲ್ಲಿ ವಸೂಲು ಮಾಡಲು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ.




