ಯರಗಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಡಿ ಟೊಪೋಜಿಯವರ ಜನ್ಮ ದಿನದಂದು ಯೂನಿವರ್ಸಿಟಿ ಬ್ಲೂ ಆಗಿರುವ ಕಾರಣಕ್ಕೆ ನೇಹಾಳನ್ನು ಹತ್ಯೆ ಮಾಡಿದ ಫಯಾಜ್ ನನ್ನು ಸತ್ಕರಿಸಲಾಗಿತ್ತು. ಆ ಸಂದರ್ಭದಲ್ಲಿ ಆತ ಮಾತ್ರವಲ್ಲ ಇನ್ನೂ ಅನೇಕ ಸಾಧಕರನ್ನು ಗೌರವಿಸಿ ಸತ್ಕರಿಸಲಾಗಿತ್ತು. ಆತನ ಸಾಧನೆಗೆ ಗೌರವ ಸಲ್ಲಿಸುವ ಉದ್ದೇಶದಿಂದ ಸತ್ಕರಿಸಿದ್ದ ಚಿತ್ರವನ್ನು ಇಟ್ಟುಕೊಂಡು ಈಗ ಕೆಲವರು ಸಾಮಾಜಿಕ ಮಾಧ್ಯಮದಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀ ಚನ್ನರಾಜ ಹಟ್ಟಿಹೊಳಿ ಹಾಗೂ ಕಾಂಗ್ರೆಸ್ ನಾಯಕರ ಬಗ್ಗೆ ಅಪಪ್ರಚಾರ ನಡೆಸುತ್ತಿರುವುದು ಖಂಡನೀಯ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಯಾವುದೋ ಹಳೆಯ ಫೋಟೋವೊಂದನ್ನು ಇಟ್ಟುಕೊಂಡು ಕಾಂಗ್ರೆಸ್ ನಾಯಕರನ್ನು ತೇಜೋವಧೆ ಮಾಡುವ ದಯನೀಯ ಸ್ಥಿತಿ ಬಿಜೆಪಿಯವರಿಗೆ ಬರಬಾರದಾಗಿತ್ತು.
ನಮ್ಮ ನಾಯಕರು ಅಂದು ಆತನ ಸಾಧನೆಯನ್ನು ಮೆಚ್ಚಿ ಸತ್ಕರಿಸಿದ್ದು ಎಷ್ಟು ಸತ್ಯವೋ ಇಂದು ಆತನ ದುಷ್ಕೃತ್ಯವನ್ನು ಖಂಡಿಸಿದ್ದು ಕೂಡ ಅಷ್ಟೇ ಸತ್ಯ.
ಹಂತಕನ ಹೆಡೆಮುರಿ ಕಟ್ಟುವ ವಿಚಾರದಲ್ಲಿ ಹಿಂಜರಿಯುವ ಮಾತೇ ಇಲ್ಲ ಎಂಬುದನ್ನು ಸ್ಪಷ್ಟಪಡಿಸುವುದರ ಜೊತೆಗೆ ಈ ರೀತಿ ಕೀಳು ರಾಜಕೀಯ ಮಾಡುವ ಮನಸ್ಥಿತಿಗೆ ವಿಷಾದ ವ್ಯಕ್ತಪಡಿಸುತ್ತೇವೆ.




