ಬೆಳಗಾವಿ: ಬೀದರ್ ನಗರಕ್ಕೆ ಉಡಾನ್ ಯೋಜನೆಯಡಿ ಕಲ್ಪಿಸಲಾಗಿದ್ದ ನಾಗರಿಕ ವಿಮಾನಯಾನ ಸೇವೆ ಒಂದೂವರೆ ವರ್ಷದಿಂದ ಸ್ಥಗಿತವಾಗಿದ್ದ ಕಾರಣ, ಜನರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ 15 ಕೋಟಿ ರೂ. ನೀಡಿ ಮರು ಆರಂಭ ಮಾಡಲಾಗಿದೆ. ಆದರೆ ಬೇರೆ ಕಡೆಗಳಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ 1000 ಕೋಟಿ ವೆಚ್ಚ ಮಾಡಲಾಗಿದೆ ಎಂದು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದರು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸದನದಲ್ಲಿ ಸದಸ್ಯರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, 1960ರ ದಶಕದಿಂದಲೂ ವಿಮಾನ ನಿಲ್ದಾಣವಿದ್ದು, ಕೇವಲ 20 ಕೋಟಿ ರೂ. ವೆಚ್ಚದಲ್ಲಿ ಟರ್ಮಿನಲ್ ಸಿದ್ಧಪಡಿಸಿ ವಿಮಾನ ಯಾನ ನಡೆಯುತ್ತಿತ್ತು. ಆದರೆ ಉಡಾನ್ ಯೋಜನೆ 3 ವರ್ಷ ಆದ ಬಳಿಕ ಸ್ಥಗಿತಗೊಂಡಿತ್ತು ಎಂದರು.
ಬೀದರ್ ನಾಗರಿಕ ವಿಮಾನ ಯಾನ ಸೇವೆಗಾಗಿ ಟರ್ಮಿನಲ್ ಮತ್ತು ಅನುದಾನ ಸೇರಿ ಒಟ್ಟು ವೆಚ್ಚ ಮಾಡಿರುವುದು 35 ಕೋಟಿ ರೂ. ಮಾತ್ರ ಎಂದು ಈಶ್ವರ ಖಂಡ್ರೆ ಸದನಕ್ಕೆ ಸ್ಪಷ್ಟನೆ ನೀಡಿದರು.




