ವಕ್ಪ್ ಆಸ್ತಿ ವಿಚಾರದಲ್ಲಿ BJP Karnataka ಪಕ್ಷದ ಆತ್ಮವಂಚನೆಯ ನಡವಳಿಕೆ ಮತ್ತೆ ಮತ್ತೆ ಬಯಲಾಗುತ್ತಿದ್ದರೂ ಕನಿಷ್ಠ ನಾಚಿಕೆ-ಮರ್ಯಾದೆ ಇಲ್ಲದೆ ಬೀದಿಗಿಳಿದು ನಮ್ಮ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದು ಆ ಪಕ್ಷದ ರಾಜಕೀಯ ದಿವಾಳಿತನ ಮತ್ತು ಹತಾಶ ಮನಸ್ಥಿತಿಯನ್ನು ಸೂಚಿಸುತ್ತದೆ.
- ಗ್ಯಾಸ್ ಏಜೆನ್ಸಿಗಳು ಗ್ರಾಹಕರೊಂದಿಗೆ ಸ್ಪಂದಿಸಿ ಶಾಂತಿಯುತವಾಗಿ ನಡೆದುಕೊಳ್ಳಿ: ಲತಾ ಕುಮಾರಿ
- ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ
- I welcome Modi finally opening his mouth on the proposed delimitation exercise: Siddaramaiah
- ಇತಿಹಾಸ ಸೃಷ್ಟಿಸಿದ ಕರ್ನಾಟಕ ರಾಜ್ಯ ರೈತ ಸಂಘ
- ಗೌರವ ಡಾಕ್ಟರೇಟ್ ತಿರಸ್ಕರಿಸಿದ ಬಸವರಾಜ ಬೊಮ್ಮಾಯಿ
ಬಣ ರಾಜಕೀಯದಿಂದ ಒಡೆದುಹೋಗಿರುವ ರಾಜ್ಯ ಬಿಜೆಪಿಯ ನಾಯಕರು ಪ್ರತಿಭಟನೆಯನ್ನು ನಡೆಸುತ್ತಿರುವುದು ವಕ್ಪ್ ಆಸ್ತಿ ರಕ್ಷಣೆಗೆ ಅಲ್ಲ, ಇದು ಬೀದಿಪಾಲಾಗಿರುವ ತಮ್ಮ ಮಾನರಕ್ಷಣೆಗೆ ಎನ್ನುವುದನ್ನು ರಾಜ್ಯದ ಜನರು ಅರ್ಥಮಾಡಿಕೊಂಡಿದ್ದಾರೆ.
ವಕ್ಪ್ ಆಸ್ತಿ ಸಂರಕ್ಷಣೆಗೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ರೈತರಿಗೆ ನೋಟಿಸ್ ನೀಡಿರುವುದು BS Yediyurappa ಮತ್ತು Basavaraj Bommai ಅವರ ಸರ್ಕಾರ ಎನ್ನುವುದನ್ನು ಬಿಜೆಪಿ ಶಾಸಕ ಕುಮಾರ ಬಂಗಾರಪ್ಪ ಅಧ್ಯಕ್ಷತೆಯ ವಿಧಾನ ಮಂಡಲದ ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯೇ ವರದಿ ನೀಡಿರುವುದನ್ನು ಇಂದು ‘‘ಪ್ರಜಾವಾಣಿ’’ ಪತ್ರಿಕೆ ವರದಿ ಮಾಡಿದೆ.
ತನ್ನ ಬಣ್ಣ ಬಯಲಾದ ನಂತರವಾದರೂ ಬುದ್ದಿ ಕಲಿತು ಈ ಪ್ರತಿಭಟನೆಯ ನಾಟಕವನ್ನು ನಿಲ್ಲಿಸಿ ತಮ್ಮ ಮಾನ-ಮರ್ಯಾದೆಯನ್ನು ಉಳಿಸಿಕೊಳ್ಳಬೇಕೆಂದು ಅವರಿಗೆ ಸಲಹೆ ನೀಡುತ್ತೇನೆ.
ಇಂತಹ ಸುಳ್ಳು ಆರೋಪ ಮತ್ತು ಅಪಪ್ರಚಾರಕ್ಕೆ ಸರಿಯಾದ ಶಿಕ್ಷೆಯನ್ನು ಇತ್ತೀಚಿನ ಉಪಚುನಾವಣೆಯಲ್ಲಿ ರಾಜ್ಯದ ಜಾಗೃತ ಮತದಾರರು ನೀಡಿದ್ದಾರೆ. ಇದರಿಂದಲೂ ಬುದ್ದಿ ಕಲಿಯದೆ ಇದ್ದರೆ ರಾಜ್ಯದಲ್ಲಿ ಬಿಜೆಪಿಯನ್ನು ಶಾಶ್ವತವಾಗಿ ವಿರೋಧಪಕ್ಷದಲ್ಲಿಯೇ ಕೂರಿಸುವುದು ಖಚಿತ.
– ಸಿದ್ದರಾಮಯ್ಯ, ಸಿಎಂ




