ವಕ್ಫ್ ಆಸ್ತಿಯ ಸಂರಕ್ಷಣೆ ವಿಷಯದಲ್ಲಿ ಅತಿದೊಡ್ಡ ವಿವಾದ ಸೃಷ್ಟಿಸುವ ಅನಗತ್ಯ ಹುನ್ನಾರ ನಡೆಸುತ್ತಿರುವ ಬಿಜೆಪಿಗರು ಕಾಂಗ್ರೆಸ್ ಅವಧಿಯಲ್ಲಿ ವಕ್ಫ್ ಹೆಸರಲ್ಲಿ ರೈತರ ಜಮೀನುಗಳಿಗೆ ನೋಟಿಸ್ ನೀಡಿ ಅದನ್ನು ಕಿತ್ತುಕೊಳ್ಳಲಾಗುತ್ತಿದೆ, ಹಿಂದೂಗಳಿಗೆ ಇದರಿಂದ ಅಪಾಯವಿದೆ ಎಂಬ ಸುಳ್ಳುಗಳನ್ನು ಹರಿ ಬಿಡುತ್ತಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಆದರೆ ಅಂಕಿ ಅಂಶಗಳನ್ನು ಗಮನಿಸಿದರೆ ಕಾಂಗ್ರೆಸ್ ಅವಧಿಯಲ್ಲಿ ಭೂಮಾಲೀಕರಿಗೆ 1201 ನೋಟಿಸ್ ಗಳನ್ನು ನೀಡಿದ್ದರೆ ಬಿಜೆಪಿಗರು ಬರೋಬ್ಬರಿ 1735 ನೋಟಿಸ್ ಗಳನ್ನು ಹೊರಡಿಸಿದ್ದಾರೆ.
ವಿಷಯವೇ ಅಲ್ಲದ ವಿಷಯದಲ್ಲಿ ರಾಜಕೀಯ ಮಾಡುತ್ತಿರುವಾಗಲೂ ಇವರದ್ದೇ ಸಮಸ್ಯೆ ಇಟ್ಟುಕೊಂಡ ಬಿಜೆಪಿಗರು ನಮ್ಮ ಸರ್ಕಾರದ ಮೇಲೆ ಅಪಪ್ರಚಾರ ಮಾಡುತ್ತಿದ್ದು ಇದಕ್ಕೆ ಈಗಾಗಲೇ ಇವರು ಜನರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.
ಆಡಳಿತದ ಗಂಧ ಗಾಳಿ ಇಲ್ಲದೇ, ವಿರೋಧ ಪಕ್ಷದ ಜವಾಬ್ದಾರಿಯೂ ತಿಳಿಯದೇ ವರ್ತಿಸುತ್ತಿರುವ ಬಿಜೆಪಿಗರಿಂದ ಕೇವಲ ಹಿಂದೂಗಳು ಮಾತ್ರವಲ್ಲದೇ ಎಲ್ಲ ವರ್ಗದವರೂ ತೊಂದರೆಗೆ ಒಳಗಾಗಿದ್ದಾರೆ.
ಇಂತಹ ಪಕ್ಷಗಳು ಸಾರ್ವಜನಿಕ ಜೀವನದಲ್ಲಿ ಇರುವುದಕ್ಕಿಂತ ತಮ್ಮ ಪಕ್ಷವನ್ನು ತಾವೇ ವಜಾಗೊಳಿಸಿಕೊಂಡರೆ ಜನರಿಗೆ ಮಹದುಪಕಾರ ಮಾಡಿದಂತೆ ಆಗುತ್ತದೆ
– ಡಾ ಎಚ್ ಸಿ ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ




