ಬೆಂಗಳೂರು: ಮುಸ್ಲಿಂ ಮೀಸಲಾತಿ ಕುರಿತ ಅನಿಮೇಟೆಡ್ ವಿಡಿಯೋ ಟ್ವೀಟ್ ವಿಚಾರಕ್ಕೆ ಸಂಬಂಧಿಸಿ ಹೈಗ್ರೌಂಡ್ಸ್ ಠಾಣೆ ಪೊಲೀಸರು ನೀಡಿದ ನೋಟೀಸ್ ಸ್ವೀಕರಿಸಲು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ನಿರಾಕರಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಪಶ್ಚಿಮ ಬಂಗಾಳದ ಕೃಷ್ಣನಗರ ಹೋಟೆಲ್ಲಿನಲ್ಲಿ ಅಮಿತ್ ಮಾಳವೀಯಾರನ್ನು ಭೇಟಿಯಾದ ಹೈಗ್ರೌಂಡ್ಸ್ ಠಾಣೆ ಪೊಲೀಸರು, ನೋಟಿಸ್ ನೀಡಲು ಮುಂದಾದಾಗ ಸ್ವೀಕರಿಸಲು ನಿರಾಕರಿಸಿದ ಅಮಿತ್ ಮಾಳವೀಯಾ, ಈಗಾಗಲೇ ಇ-ಮೇಲ್ ಮೂಲಕ ನನಗೆ ನೋಟಿಸ್ ಬಂದಿದೆ. ನೋಟಿಸ್ಗೆ ಉತ್ತರ ನೀಡಲು ಏಳು ದಿನಗಳ ಕಾಲ ಅವಕಾಶ ಇದೆ ಎಂದರು.
ನೋಟಿಸ್ ಗೆ ನಮ್ಮ ವಕೀಲರು ಉತ್ತರ ನೀಡುತ್ತಾರೆ ಎಂದು ಮಾಳವೀಯಾ ಹೇಳಿದರು. ಹೀಗಾಗಿ ನೋಟಿಸ್ ನೀಡಲು ಹೋಗಿದ್ದ ಹೈಗ್ರೌಂಡ್ಸ್ ಠಾಣೆ ಪೊಲೀಸರು ವಾಪಸಾಗಿದ್ದಾರೆ.
ಟ್ವಿಟರ್ ನಲ್ಲಿ ಸಮುದಾಯಗಳಿಗೆ ಸಂಬಂಧಿಸಿ ಪೋಸ್ಟ್ ಮಾಡಿದ್ದ ಆರೋಪವನ್ನು ಮಾಳವೀಯ ಎದುರಿಸುತ್ತಿದ್ದಾರೆ. ಟ್ವಿಟರ್ ನಲ್ಲಿ ಕರ್ನಾಟಕ ಬಿಜೆಪಿ ಘಟಕ ವಿಡಿಯೋ ಪೋಸ್ಟ್ ಮಾಡಿತ್ತು. ಅದರಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಮುಸ್ಲಿಮರು ಎಂಬಂತೆ ಬಿಂಬಿಸಲಾಗಿತ್ತು.
ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿದ್ದ ಅನಿಮೇಷನ್ ವಿಡಿಯೋದಲ್ಲಿ ಒಂದು ಗೂಡಿನಲ್ಲಿ 3 ಮೊಟ್ಟೆಗಳಿರುತ್ತವೆ. ಆ ಮೊಟ್ಟೆಗಳನ್ನು ಎಸ್ ಸಿ, ಎಸ್ ಟಿ ಮತ್ತು ಒಬಿಸಿ ಎಂದು ಟ್ಯಾಗ್ ಮಾಡಲಾಗಿದೆ. ಮುಸ್ಲಿಮರನ್ನು ಪ್ರತಿನಿಧಿಸುವ ಮತ್ತೊಂದು ಮೊಟ್ಟೆಯನ್ನು ಆ ಗೂಡಿಗೆ ಸೇರಿಸಲಾಗುತ್ತದೆ. ಆ ಮೊಟ್ಟೆಯೊಡೆದ ನಂತರ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಸ್ಲಿಂ ಕೋಳಿಗೆ ಮಾತ್ರ ಆಹಾರ ನೀಡುತ್ತಿರುವುದು ಒಂದು ಸಮುದಾಯದ ಕಡೆಗೆ ಒಲವು ತೋರುತ್ತಿದೆ ಎಂಬುದರ ಸಂಕೇತವಾಗಿತ್ತು.
ಈ ಪೋಸ್ಟ್ ವಿರುದ್ಧ ಕೆಪಿಸಿಸಿ ಕಾನೂನು ಘಟಕದ ರಮೇಶ್ ಬಾಬು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದರು.
ವಿಡಿಯೋವನ್ನು ತಕ್ಷಣ ತೆಗೆದುಹಾಕುವಂತೆ ಚುನಾವಣಾ ಆಯೋಗ ಕಳೆದ ವಾರ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ಗೆ (ಟ್ವಿಟ್ಟರ್) ಸೂಚನೆ ನೀಡಿತ್ತು.




