ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಣ ವರ್ಗಾವಣೆ ಮತ್ತು ಮೈಸೂರು ನಗರಾಭಿವೃದ್ಧಿ ಪಾದಯಾತ್ರೆ ಮಾಡಿದರೆ ಅಡ್ಡಿಪಡಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್ ನಡೆಸಲು ಉದ್ದೇಶಿಸಿರುವ ಪಾದಯಾತ್ರೆಗೆ ಸರ್ಕಾರ ಅನುಮತಿ ನೀಡಿಲ್ಲ. ಆದರೆ ಅವರು ಪಾದಯಾತ್ರೆ ಮಾಡಿದರೆ ಅಡ್ಡಿಪಡಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಮಾಡಿಕೊಳ್ಳಲಿ. ಆದರೆ ಅಧಿಕೃತವಾಗಿ ನಾವು ಅನುಮತಿ ನೀಡುವುದಿಲ್ಲ. ಅಗತ್ಯವಾದ ವ್ಯವಸ್ಥೆ ಮಾಡಿಕೊಡುತ್ತೇವೆ ಎಂದರು.
ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಾವು ಪಾದಯಾತ್ರೆ ಮಾಡುವಾಗಲೂ ಅವರು ಅನುಮತಿ ನೀಡಿರಲಿಲ್ಲ. ಅದೇ ರೀತಿ ನಾವು ಅನುಮತಿಸುವುದಿಲ್ಲ. ಹಾಗೆಯೇ ಅವರ ಪಾದಯಾತ್ರೆಗೆ ತಡೆ ಮಾಡುವುದಿಲ್ಲ ಎಂದರು.
ಪ್ರತಿಪಕ್ಷಗಳ ಈ ಹೋರಾಟಕ್ಕೆ ಪ್ರತಿಯಾಗಿ ಕಾಂಗ್ರೆಸ್ನಿಂದ ಹೋರಾಟ ನಡೆಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ರಣನೀತಿ ರೂಪಿಸುತ್ತಾರೆ. ರಾಜಕೀಯವಾಗಿ ನಾವೂ ಕೂಡ ಉತ್ತರ ನೀಡಲೇಬೇಕಿದೆ. ವಿಪಕ್ಷಗಳು ಇದನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ. ನಾವು ರಾಜಕೀಯವಾಗಿಯೇ ಮಾತನಾಡುತ್ತೇವೆ ಎಂದರು.




