ಬಿಜೆಪಿ – ಜೆಡಿಎಸ್ ಪಾದಯಾತ್ರೆ ಮಾಡಿದರೆ ಅಡ್ಡಿಪಡಿಸುವುದಿಲ್ಲ: ಡಾ.ಜಿ.ಪರಮೇಶ್ವರ್

2 years ago

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಣ ವರ್ಗಾವಣೆ ಮತ್ತು ಮೈಸೂರು ನಗರಾಭಿವೃದ್ಧಿ ಪಾದಯಾತ್ರೆ ಮಾಡಿದರೆ ಅಡ್ಡಿಪಡಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣ ವಿರೋಧಿಸಿ ಬಿಜೆಪಿ-ಜೆಡಿಎಸ್  ನಡೆಸಲು ಉದ್ದೇಶಿಸಿರುವ ಪಾದಯಾತ್ರೆಗೆ ಸರ್ಕಾರ ಅನುಮತಿ ನೀಡಿಲ್ಲ. ಆದರೆ ಅವರು ಪಾದಯಾತ್ರೆ ಮಾಡಿದರೆ ಅಡ್ಡಿಪಡಿಸುವುದಿಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದಯಾತ್ರೆ ಮಾಡಿಕೊಳ್ಳಲಿ. ಆದರೆ ಅಧಿಕೃತವಾಗಿ ನಾವು ಅನುಮತಿ ನೀಡುವುದಿಲ್ಲ. ಅಗತ್ಯವಾದ ವ್ಯವಸ್ಥೆ ಮಾಡಿಕೊಡುತ್ತೇವೆ ಎಂದರು.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ  ನಾವು ಪಾದಯಾತ್ರೆ ಮಾಡುವಾಗಲೂ ಅವರು ಅನುಮತಿ ನೀಡಿರಲಿಲ್ಲ. ಅದೇ ರೀತಿ ನಾವು ಅನುಮತಿಸುವುದಿಲ್ಲ. ಹಾಗೆಯೇ ಅವರ ಪಾದಯಾತ್ರೆಗೆ ತಡೆ ಮಾಡುವುದಿಲ್ಲ ಎಂದರು.

ಪ್ರತಿಪಕ್ಷಗಳ ಈ ಹೋರಾಟಕ್ಕೆ ಪ್ರತಿಯಾಗಿ ಕಾಂಗ್ರೆಸ್ನಿಂದ ಹೋರಾಟ ನಡೆಸುವ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ರಣನೀತಿ ರೂಪಿಸುತ್ತಾರೆ. ರಾಜಕೀಯವಾಗಿ ನಾವೂ ಕೂಡ ಉತ್ತರ ನೀಡಲೇಬೇಕಿದೆ. ವಿಪಕ್ಷಗಳು ಇದನ್ನು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ. ನಾವು ರಾಜಕೀಯವಾಗಿಯೇ ಮಾತನಾಡುತ್ತೇವೆ ಎಂದರು.

Leave a Reply