ಚಿಕ್ಕಮಗಳೂರು: ಬಿಜೆಪಿ ನಾಯಕ ಸಿ ಟಿ ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕತೆ ಹೆಣೆಯುವುದರಲ್ಲಿ ನಿಸ್ಸೀಮ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಟೀಕಿಸಿದ್ದಾರೆ.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಸಿ ಟಿ ರವಿ ವಿರುದ್ಧದ ಬೆದರಿಕೆ ಪತ್ರ, ಕರೆ ಕುರಿತು ಶೃಂಗೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಅವರನ್ನು (ಸಿ ಟಿ ರವಿ) ರಾಷ್ಟ್ರೀಯ ನಾಯಕರು, ಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ಎಂದು ಭಾವಿಸಿದ್ದೆ. ಅವರ ಮಾತು, ವಿಚಾರ ನೋಡಿದ ನಂತರ ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ ಎಂದರು.
ಈ ಪ್ರಕರಣದಲ್ಲಿ ಅವರು ಬೇರೆ ಯಾರ ಮಾತು ಕೇಳಬೇಕಿಲ್ಲ. ಅವರ ಆತ್ಮಸಾಕ್ಷಿ ಮಾತನ್ನು ಕೇಳಲಿ. ಆ ರೀತಿ ಮಾತನಾಡಬಾರದಿತ್ತು ಎಂದು ಅವರ ಪಕ್ಷದ ನೂರು ನಾಯಕರು ನನ್ನ ಬಳಿ ಹೇಳಿದ್ದಾರೆ. ಅಚಾತುರ್ಯವಾಗಿ ಆ ರೀತಿ ಮಾತಾಡಿದ್ದೇನೆ ಕ್ಷಮೆ ಕೇಳುತ್ತೇನೆ ಎಂದಿದ್ದರೆ ಪ್ರಕರಣ ಮುಗಿಯುತ್ತಿತ್ತು. ಅದನ್ನು ಬಿಟ್ಟು ಸುಳ್ಳಿಗೆ ಸುಳ್ಳು ಸೇರಿಸಿಕೊಂಡು ಹೋದರೆ ಪ್ರಯೋಜನವಿಲ್ಲ. ಅವರ ಆರೋಪ ಸುಳ್ಳು. ಅವರದ್ದೇ ಅನೇಕ ತನಿಖಾ ತಂಡಗಳಿವೆಯಲ್ಲ ತನಿಖೆ ಮಾಡಿಸಲಿ ಎಂದು ಸವಾಲೆಸೆದರು.




