ಕುಟುಂಬ ರಾಜಕಾರಣದ ವಿರುದ್ಧ ಬಿಜೆಪಿ ರಣಕಹಳೆಯ ಪರಿಯ ನೋಡಾ!

3 years ago

ಕರ್ನಾಟಕ ಬಿಜೆಪಿಯ ‘ವಂಶಾವಳಿ’ ಪೋಸ್ಟ್ ಮಾರ್ಟಂ!

ಪ್ರಧಾನಿ ಮೋದಿಯಿಂದ ಹಿಡಿದು ಬಿಜೆಪಿಯ ತಳಹಂತದ ನಾಯಕರವರೆಗೆ ಎಲ್ಲರೂ ‘ವಂಶಪಾರಂಪರ್ಯ ರಾಜಕಾರಣ’ದ ವಿರುದ್ಧ ಮಾತನಾಡುತ್ತಾರೆ. ಆದರೆ ಬಿಜೆಪಿಯಲ್ಲಿ ವಂಶಪಾರಂಪರ್ಯ ರಾಜಕಾರಣ ಇಲ್ಲವೇ? ಈ ಬಾರಿ ಟಿಕೆಟ್ ಪಡೆದ ‘ರಾಜಕೀಯ ವಂಶ’ಗಳ ಕುಡಿಗಳ ವಿವರ ಇಲ್ಲಿದೆ ನೋಡಿ.

  1. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜಕೀಯ ವಂಶದಿಂದ ಬಂದವರು. ಅವರ ಅಪ್ಪ ಎಸ್.ಆರ್.ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದರು.
  2. ಬಿ.ಎಸ್.ಯಡಿಯೂರಪ್ಪ ಅವರ ಒಬ್ಬ ಮಗ ಬಿ.ವೈ.ರಾಘವೇಂದ್ರ ಶಿವಮೊಗ್ಗ ಸಂಸದ. ಇನ್ನೊಬ್ಬ ಮಗ ಬಿ.ವೈ.ವಿಜಯೇಂದ್ರ ಶಿಕಾರಿಪುರದಲ್ಲಿ ಅಭ್ಯರ್ಥಿ.
  3. ರವಿ ಸುಬ್ರಹ್ಮಣ್ಯ ಬಸವನಗುಡಿ ಅಭ್ಯರ್ಥಿ, ಅವರ ಅಳಿಯ ತೇಜಸ್ವಿ ಸೂರ್ಯ ಬೆಂಗಳೂರು ದಕ್ಷಿಣ ಸಂಸದ.
  4. ಜಿ.ಎಸ್. ಬಸವರಾಜು ಈಗಾಗಲೇ ತುಮಕೂರು ಸಂಸತ್ ಸದಸ್ಯ, ಅವರ ಪುತ್ರ ಜ್ಯೋತಿ ಗಣೇಶ್ ಬಿಜೆಪಿ ಅಭ್ಯರ್ಥಿ.
  5. ಅಣ್ಣತಮ್ಮಂದಿರಾದ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಇಬ್ಬರೂ ಬಿಜೆಪಿ ಅಭ್ಯರ್ಥಿಗಳು.
  6. ಉಮೇಶ್ ಕತ್ತಿ ಸಹೋದರ ಮತ್ತು ಪುತ್ರ ಇಬ್ಬರೂ ಈ ಬಾರಿ ಬಿಜೆಪಿ ಅಭ್ಯರ್ಥಿಗಳು.
  7. ಸೋದರರಾದ ಕರುಣಾಕರರೆಡ್ಡಿ, ಸೋಮಶೇಖರ ರೆಡ್ಡಿ ಇಬ್ಬರೂ ಬಿಜೆಪಿ ಅಭ್ಯರ್ಥಿಗಳು.
  8. ಸಂಸದ ಶ್ರೀನಿವಾಸ ಪ್ರಸಾದ ಅವರ ಅಳಿಯ ಹರ್ಷವರ್ಧನ್ ಬಿಜೆಪಿ ಅಭ್ಯರ್ಥಿ.
  9. ಸಂಸದ ಅಣ್ಣಾಸಾಹೇಬ್ ಜೊಲ್ಲೆಯವರ ಪತ್ನಿ ಶಶಿಕಲಾ ಜೊಲ್ಲೆ ಬಿಜೆಪಿ ಅಭ್ಯರ್ಥಿ.
  10. ಮಾಜಿ ಸಚಿವ ನಾಗಪ್ಪ ಅವರ ಪುತ್ರ ಪ್ರೀತಂ ನಾಗಪ್ಪ ಬಿಜೆಪಿ ಅಭ್ಯರ್ಥಿ
  11. ಸಂಸದ ಉಮೇಶ್ ಜಾದವ್ ಅವರ ಪುತ್ರ ಅವಿನಾಶ್ ಜಾದವ್ ಬಿಜೆಪಿ ಅಭ್ಯರ್ಥಿ.
  12. ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪನವರ ಮಗ ಕುಮಾರ್ ಬಂಗಾರಪ್ಪ ಬಿಜೆಪಿ ಅಭ್ಯರ್ಥಿ.
  13. ಮಾಜಿ ಶಾಸಕ ಚಂದ್ರಶೇಖರ ಪಾಟೀಲ್ ರೇವೂರ ಮಗ ದತ್ತಾತ್ರೇಯ ಪಾಟೀಲ್ ಬಿಜೆಪಿ ಅಭ್ಯರ್ಥಿ.
  14. ಮಾವ-ಅಳಿಯ ಶ್ರೀರಾಮುಲು, ಸುರೇಶ್ ಬಾಬು ಬಿಜೆಪಿ ಅಭ್ಯರ್ಥಿಗಳು.
  15. ಮಾಜಿ ಶಾಸಕ ಚಂದ್ರಕಾಂತ್ ಬೆಲ್ಲದ್ ಮಗ ಅರವಿಂದ ಬೆಲ್ಲದ್ ಬಿಜೆಪಿ ಅಭ್ಯರ್ಥಿ.
  16. ಚಂದ್ರಕಾಂತ್ ಪಾಟೀಲ್ ಬಿಜೆಪಿ ಅಭ್ಯರ್ಥಿ. ಅವರ ಅಪ್ಪ ಮಾಜಿ ಎಂಎಲ್ ಸಿ
  17. ಸಪ್ತಗಿರಿ ಗೌಡ ಬಿಜೆಪಿ ಅಭ್ಯರ್ಥಿ. ಅವರ ತಂದೆ ರಾಮಚಂದ್ರಗೌಡ ಮಾಜಿ ಸಚಿವರು.
  18. ಮಾಜಿ ಶಾಸಕ ಅಯ್ಯಪ್ಪ ದೇಸಾಯಿ ಪುತ್ರ ಅಮೃತ್ ದೇಸಾಯಿ ಬಿಜೆಪಿ ಅಭ್ಯರ್ಥಿ.
  19. ಮಾಜಿ ಸಚಿವ ಆನಂದ್ ಸಿಂಗ್ ಮಗ ಸಿದ್ಧಾರ್ಥ್ ಸಿಂಗ್ ಬಿಜೆಪಿ ಅಭ್ಯರ್ಥಿ.
  20. ಮಾಜಿ ಸಚಿವ ಎ.ಕೃಷ್ಣಪ್ಪ ಪುತ್ರಿ ಪೂರ್ಣಿಮಾ ಶ್ರೀನಿವಾಸ್ ಬಿಜೆಪಿ ಅಭ್ಯರ್ಥಿ.

ಸಾಕಾ? ಇನ್ನೂ ಬೇಕಾ?
ಬಿಜೆಪಿಯವರು ‘ವಂಶಪಾರಂಪರ್ಯ’ ‘ಪರಿವಾರವಾದ’ ಎಂದು ತಲೆತಿನ್ನಲು ಬಂದರೆ, ಈ ಪಟ್ಟಿ ಮೂತಿಗೆ ಹಿಡಿದು ಇದೆಲ್ಲ ಏನ್ರಪ್ಪ ಎಂದು ತಪ್ಪದೇ ಪ್ರಶ್ನಿಸಿ.

ದಿನೇಶ್ ಕುಮಾರ್ ಎಸ್.ಸಿ., ಹಿರಿಯ ಪತ್ರಕರ್ತರು

Leave a Reply