ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಮಿಷನರ್ ಹೇಮಂತ್ ನಿಂಬಾಳ್ಕರ್ ಅವರನ್ನು ಈ ಕೂಡಲೇ ಹುದ್ದೆಯಿಂದ ವರ್ಗಾವಣೆ ಮಾಡುವಂತೆ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಹೇಮಂತ್ ನಿಂಬಾಳ್ಕರ್ ಅವರು ತಮ್ಮ ಅಧಿಕಾರ ಬಳಸಿಕೊಂಡು ತಮ್ಮ ಪತ್ನಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ ಅವರ ಪರವಾಗಿ ಪ್ರಚಾರ ಮಾಡುತ್ತಿರುವುದಾಗಿ ಮಾಹಿತಿ ಸಿಕ್ಕಿದೆ ಎಂದು ಬಿಜೆಪಿ ಆರೋಪಿಸಿದೆ.
ಈ ಕಾರಣದಿಂದಾಗಿ ತಕ್ಷಣ ಅವರನ್ನು ವರ್ಗಾವಣೆ ಮಾಡಿ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಯಲು ಅವಕಾಶ ಮಾಡಿಕೊಡುವಂತೆ ಬಿಜೆಪಿಯ ನಾಯಕರು ಚುನಾವಣಾ ಕಮಿಷನರ್ ಅವರಲ್ಲಿ ಮನವಿ ಮಾಡಿದ್ದಾರೆ.




