ಕ್ಷಮೆ ಕೇಳುವುದರಲ್ಲಿ ಎರಡು ವಿಧ. ನೈಜ ಕ್ಷಮೆ ಮತ್ತು ಬಿಜೆಪಿಗರ ನಕಲಿ ಕ್ಷಮೆ! ನೈಜ ಕ್ಷಮೆಯ ಹಿಂದೆ ಪಶ್ಚಾತಾಪವಿರುತ್ತದೆ, ವಿಚಾರ ಪಕ್ವತೆ ಇರುತ್ತದೆ, ಜಾಗೃತಿ ಇರುತ್ತದೆ, ತಪ್ಪೆಸಗಿದ್ದಕ್ಕೆ ಗಿಲ್ಟ್ ಇರುತ್ತದೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಬಿಜೆಪಿಯವರ ನಕಲಿ ಕ್ಷಮೆಗೆ ಕಾರಣಗಳೇ ಬೇರೆ, ಬಿಜೆಪಿಗರ ಕ್ಷಮೆಯಲ್ಲಿ ಪಶ್ಚಾತಾಪವಿರುವ ಬದಲು ಅಹಂಕಾರವಿರುತ್ತದ. ಅವರ ಕ್ಷಮೆಯ ಹಿಂದೆ ಅವಕಾಶವಾದಿತನ ಇರುತ್ತದೆ ಅಥವಾ ಕಾನೂನಿನ ಭಯವಿರುತ್ತದೆ, ಇಲ್ಲವೇ ಜನಾಕ್ರೋಶದ ಒತ್ತಡ ಇರುತ್ತದೆ ಅಷ್ಟೇ. ಬಿಜೆಪಿಗರದ್ದು ಸ್ವಯಂಪ್ರೇರಣೆಯ, ಜ್ಞಾನೋದಯದ ಕ್ಷಮೆ ಅಲ್ಲವೇ ಅಲ್ಲ.
ಬಿಜೆಪಿಗರ ಮನಃಪೂರ್ವಕವಲ್ಲದ ದುರಹಂಕಾರದ ಕ್ಷಮೆಗೆ ಉದಾಹರಣೆ ಹಲವು ಇವೆ. ಕಲಬುರಗಿ ಜಿಲ್ಲಾಧಿಕಾರಿಗಳಿಗೆ ಕ್ಷಮೆ ಕೇಳಿದ ಪರಿಷತ್ ಸದಸ್ಯ ರವಿಕುಮಾರ್ ಅವರು ಘನಂದಾರಿ ಕೆಲಸ ಮಾಡಿದವರಂತೆ ಮೆರವಣಿಗೆಯಲ್ಲಿ ಪೊಲೀಸ್ ಠಾಣೆಗೆ ಹೋಗುತ್ತಾರೆ ಎಂದರೆ ಅವರ ಕ್ಷಮೆ ಕೇವಲ ಬೂಟಾಟಿಕೆಯದ್ದು ಹೊರತು ಮನಃಪೂರ್ವಕವಾದುದಲ್ಲ.
– ನಟ ಪ್ರಕಾಶ್ ರಾಜ್ ಅವರನ್ನು ಅವಹೇಳನ ಮಾಡಿದ್ದ ಪ್ರತಾಪ್ ಸಿಂಹ ಕಾನೂನಿನ ಒತ್ತಡಕ್ಕೆ ಕ್ಷಮೆ ಕೇಳಿದ್ದಾರೆ.
– ಸೋಫಿಯಾ ಖುರೇಶಿಯವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ವಿಜಯ್ ಷಾ ಜನಾಕ್ರೋಶಕ್ಕೆ ಕ್ಷಮೆ ಕೇಳಿದ್ದಾರೆ.
– ನನಗೆ ನಾಯಿ ಎಂದಿದ್ದ ನಾರಾಯಣಸ್ವಾಮಿಯವರು ಜನಾಕ್ರೋಶದ ಒತ್ತಡಕ್ಕೆ ಕ್ಷಮೆ ಕೇಳಿದ್ದಾರೆ.
ಬಿಜೆಪಿಯವರು ಕ್ಷಮೆ ಕೇಳುವುದರಲ್ಲಿ ಸಾವರ್ಕರ್ ಅವರ ಬದ್ಧತೆಯನ್ನಾದರೂ ತೋರಿಸಬೇಕು. ಸಾವರ್ಕರ್ ಮನಃಪೂರ್ವಕವಾಗಿ ಬ್ರಿಟಿಷರ ಕ್ಷಮೆ ಕೇಳಿ, ನಂತರ ಬ್ರಿಟಿಷರ ಜೊತೆ ನಿಂತು ಕೆಲಸ ಮಾಡಿದ್ದ ಅವರ ಪ್ರಾಮಾಣಿಕತೆಯನ್ನು ಅನುಸರಿಸಬೇಕು!!!
– ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ




