ಸಿ.ಟಿ.ರವಿ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟಿಸುವ ಮೂಲಕ ಹೆಣ್ಣುಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಬೆಂಬಲಿಸುತ್ತಿದೆ: ಸಿದ್ದರಾಮಯ್ಯ
ಮಂಡ್ಯ: ಸಿ.ಟಿ.ರವಿ ಬಂಧನ ವಿರೋಧಿಸಿ ಬಿಜೆಪಿ ಪಕ್ಷ ಪ್ರತಿಭಟನೆ ಮಾಡುವ ಮೂಲಕ ಹೆಣ್ಣುಮಕ್ಕಳಿಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಬೆಂಬಲಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದು ಸುಳ್ಳಾದರೆ ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಸಿ.ಟಿ. ರವಿಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ. ಆದರೆ ಇದೊಂದು ಗಂಭೀರ ಸ್ವರೂಪದ ಅಪರಾಧ ಎಂದರು.
ಸಿ.ಟಿ.ರವಿಯವರು ತಾವು ‘ಪ್ರಸ್ಟ್ರೇಷನ್’ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವೆಂದು ಸಚಿವರು ಹೇಳಿದ್ದಾರೆ. ಕೀಳು ಪದಬಳಕೆಯನ್ನು ಕೇಳಿರುವುದಾಗಿ ಅಲ್ಲಿಯೇ ಇದ್ದ ಇತರ ಸದಸ್ಯರೂ ಹೇಳಿದ್ದಾರೆ. ಸಭಾಪತಿಯವರು ಪೀಠದಿಂದ ಹೊರನಡೆದ ನಂತರ ನಡೆದಿರುವ ಘಟನೆ ಬಗ್ಗೆ ಆಡಿಯೋ ಮತ್ತು ವಿಡಿಯೋ ಇದೆ ಎಂದೂ ಹಲವರು ಹೇಳುತ್ತಿದ್ದು, ಪದಬಳಕೆಯಾಗಿರುವುದು ಸತ್ಯ ಎಂದರು.
ಸಿ.ಟಿ ರವಿಯವರು ಎಸಗಿರುವ ಅಪರಾಧ ಕೃತ್ಯಕ್ಕೆ ಅನುಗುಣವಾಗಿ ಕಾನೂನಿನ ಕ್ರಮ ಜರುಗಿಸಬೇಕಾಗುತ್ತದೆ. ಬೆಳಗಾವಿಯಲ್ಲಿ ಜನರ ಆಕ್ರೋಶದಿಂದ ಸಿ.ಟಿ.ರವಿಯವರನ್ನು ರಕ್ಷಿಸಲು ಖಾನಾಪುರಕ್ಕೆ ಅವರನ್ನು ಕರೆತರಲಾಗಿತ್ತು ಎಂದು ಹೇಳಿದರು.




