ಬೆಂಗಳೂರು: ಬಿಜೆಪಿ ಹೇಳೋದು ಮಾತ್ರ ಆಚಾರ, ನಡೆದುಕೊಳ್ಳುವುದೆಲ್ಲ ಅನಾಚಾರವೇ. ಶಾಲೆ, ಸರ್ಕಾರಿ ಆವರಣಗಳು ಶಿಕ್ಷಣೇತರ ಚಟುವಟಿಕೆಗಳಿಂದ ದೂರ ಇರಬೇಕೆಂದು BJP Karnataka ಸರ್ಕಾರದ ಅವಧಿಯಲ್ಲೇ ಆದೇಶ ಮಾಡಿರುವುದನ್ನ ಬಿಜೆಪಿ ಮರೆತಂತಿದೆ. ಇದು ಬಿಜೆಪಿಯ ಜಾಣ ಕುರುಡಾ? ಇಲ್ಲ ಸರ್ಕಾರದ ಗಮನಕ್ಕೇ ಬಾರದೇ ಇಂತಹ ಆದೇಶಗಳಾಗುವುದು “ಕೇಶವ ಕೃಪಾ”ದಲ್ಲಾ? ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿರುವ ಅವರು, ಸಂವಿಧಾನವನ್ನು ಒಪ್ಪಿಕೊಂಡವರು ಸರ್ಕಾರದ ನೀತಿ, ನಿಯಮಗಳನ್ನು ಪಾಲಿಸಬೇಕಾದ್ದೂ ಮೊದಲ ಕರ್ತವ್ಯ. ಪ್ರಜೆಗಳು ಮಾತ್ರವಲ್ಲ, ಯಾವ ಸಂಘ ಸಂಸ್ಥೆಗಳು ಕೂಡ ಕಾನೂನುಗಳನ್ನು ಮೀರಿ ವರ್ತನೆ ಮಾಡುವಂತಿಲ್ಲ. ಆರ್.ಎಸ್ಎಸ್ ಹಾಗೂ ಸಂಘ ಪರಿವಾರ ಕಾನೂನನ್ನೂ ಮೀರಿದವರೇ? ದೇಶದ ಯಾವ ನೀತಿ,ನಿಯಮ,ಕಾನೂನುಗಳು ಸಂಘ ಪರಿವಾರಕ್ಕೆ ಅನ್ವಯಿಸುವುದಿಲ್ಲವೇ? ಎಂದು ಕೇಳಿದ್ದಾರೆ.
ಸಂವಿಧಾನವನ್ನು ಒಪ್ಪದವರು, ಸಂವಿಧಾನವನ್ನು ಪಾಲಿಸದವರಿಂದ ಶಾಂತಿ, ಸೌಹಾರ್ದತೆ, ಸಹಬಾಳ್ವೆ ನಿರೀಕ್ಷಿಸಲು ಸಾಧ್ಯವಿಲ್ಲ. ಅನೈತಿಕ, ಅಕ್ರಮ ಚಟುವಟಿಕೆಗಳನ್ನು ನಡೆಸುವ ಉದ್ದೇಶಕ್ಕಾಗಿಯೇ ಆರ್ಎಸ್ಎಸ್ ಸಂಘಟನೆ ನೋಂದಾವಣಿ ಮಾಡಿಕೊಂಡಿಲ್ಲ ಎಂಬುದು ಸ್ಪಷ್ಟ. ಈ ಕಾರಣಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಭೂಗತವಾಗಿಯೇ ತನ್ನ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದಿದ್ದಾರೆ.
ಇಂತಹ ಸಮಾಜ ಘಾತುಕ ಸಂಘಟನೆಗಳ ಉಪಟಳಕ್ಕೆ ಕಡಿವಾಣ ಹಾಕಲೇಬೇಕು. ಸರ್ಕಾರ ಕೂಡಲೇ ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.





