ಬೆಂಗಳೂರು: ಬಿಜೆಪಿ ಹೇಳೋದು ಮಾತ್ರ ಆಚಾರ, ನಡೆದುಕೊಳ್ಳುವುದೆಲ್ಲ ಅನಾಚಾರವೇ. ಶಾಲೆ, ಸರ್ಕಾರಿ ಆವರಣಗಳು ಶಿಕ್ಷಣೇತರ ಚಟುವಟಿಕೆಗಳಿಂದ ದೂರ ಇರಬೇಕೆಂದು BJP Karnataka ಸರ್ಕಾರದ ಅವಧಿಯಲ್ಲೇ ಆದೇಶ ಮಾಡಿರುವುದನ್ನ ಬಿಜೆಪಿ ಮರೆತಂತಿದೆ. ಇದು ಬಿಜೆಪಿಯ ಜಾಣ ಕುರುಡಾ? ಇಲ್ಲ ಸರ್ಕಾರದ ಗಮನಕ್ಕೇ ಬಾರದೇ ಇಂತಹ ಆದೇಶಗಳಾಗುವುದು “ಕೇಶವ ಕೃಪಾ”ದಲ್ಲಾ? ಎಂದು ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿರುವ ಅವರು, ಸಂವಿಧಾನವನ್ನು ಒಪ್ಪಿಕೊಂಡವರು ಸರ್ಕಾರದ ನೀತಿ, ನಿಯಮಗಳನ್ನು ಪಾಲಿಸಬೇಕಾದ್ದೂ ಮೊದಲ ಕರ್ತವ್ಯ. ಪ್ರಜೆಗಳು ಮಾತ್ರವಲ್ಲ, ಯಾವ ಸಂಘ ಸಂಸ್ಥೆಗಳು ಕೂಡ ಕಾನೂನುಗಳನ್ನು ಮೀರಿ ವರ್ತನೆ ಮಾಡುವಂತಿಲ್ಲ. ಆರ್.ಎಸ್ಎಸ್ ಹಾಗೂ ಸಂಘ ಪರಿವಾರ ಕಾನೂನನ್ನೂ ಮೀರಿದವರೇ? ದೇಶದ ಯಾವ ನೀತಿ,ನಿಯಮ,ಕಾನೂನುಗಳು ಸಂಘ ಪರಿವಾರಕ್ಕೆ ಅನ್ವಯಿಸುವುದಿಲ್ಲವೇ? ಎಂದು ಕೇಳಿದ್ದಾರೆ.
ಸಂವಿಧಾನವನ್ನು ಒಪ್ಪದವರು, ಸಂವಿಧಾನವನ್ನು ಪಾಲಿಸದವರಿಂದ ಶಾಂತಿ, ಸೌಹಾರ್ದತೆ, ಸಹಬಾಳ್ವೆ ನಿರೀಕ್ಷಿಸಲು ಸಾಧ್ಯವಿಲ್ಲ. ಅನೈತಿಕ, ಅಕ್ರಮ ಚಟುವಟಿಕೆಗಳನ್ನು ನಡೆಸುವ ಉದ್ದೇಶಕ್ಕಾಗಿಯೇ ಆರ್ಎಸ್ಎಸ್ ಸಂಘಟನೆ ನೋಂದಾವಣಿ ಮಾಡಿಕೊಂಡಿಲ್ಲ ಎಂಬುದು ಸ್ಪಷ್ಟ. ಈ ಕಾರಣಕ್ಕಾಗಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಭೂಗತವಾಗಿಯೇ ತನ್ನ ಕಾರ್ಯ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದಿದ್ದಾರೆ.
ಇಂತಹ ಸಮಾಜ ಘಾತುಕ ಸಂಘಟನೆಗಳ ಉಪಟಳಕ್ಕೆ ಕಡಿವಾಣ ಹಾಕಲೇಬೇಕು. ಸರ್ಕಾರ ಕೂಡಲೇ ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.





