ಮಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಯಾದ CITU ನ 18ನೇ ದ.ಕ.ಜಿಲ್ಲಾ ಸಮ್ಮೇಳನ ಅಕ್ಟೋಬರ್ 5 ಮತ್ತು 6ರಂದು ಎರಡು ದಿನಗಳ ಕಾಲ ಮಂಗಳೂರಿನ ಬೋಳಾರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಜಿಲ್ಲೆಯ ಕಾರ್ಮಿಕ ವರ್ಗಕ್ಕೆ ಬಾಧಿಸುವ ಹಲವಾರು ಅಂಶಗಳ ಬಗ್ಗೆ ನಿರ್ಣಯಗಳನ್ನು ಕೈಗೊಂಡ ಸಮ್ಮೇಳನವು ಮುಂಬರುವ ದಿನಗಳಲ್ಲಿ ಪ್ರಬಲ ಹೋರಾಟಗಳನ್ನು ರೂಪಿಸಲು ತೀರ್ಮಾನ ಕೈಗೊಂಡಿತು.ಸಮ್ಮೇಳನವು ಮುಂದಿನ ಮೂರು ವರ್ಷಕ್ಕೆ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆಗೊಳಿಸಿತು.
ನೂತನ ಜಿಲ್ಲಾಧ್ಯಕ್ಷರಾಗಿ ಬಿ ಎಂ ಭಟ್,ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್ ಬಜಾಲ್ ಹಾಗೂ ಖಜಾಂಚಿಯಾಗಿ ಯೋಗೀಶ್ ಜಪ್ಪಿನಮೊಗರುರರವರನ್ನು ಸರ್ವಾನುಮತದಿಂದ ಆರಿಸಲಾಯಿತು. ಉಪಾಧ್ಯಕ್ಷರುಗಳಾಗಿ ಜೆ ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೋಟು, ವಸಂತ ಆಚಾರಿ, ಪದ್ಮಾವತಿ ಶೆಟ್ಟಿ, ರಮಣಿ ಮೂಡಬಿದ್ರೆ, ಯಾದವ ಶೆಟ್ಟಿ, ಸುಂದರ ಕುಂಪಲ, ನೋಣಯ್ಯಗೌಡ ಹಾಗೂ ಕಾರ್ಯದರ್ಶಿಗಳಾಗಿ ರಾಧಾ ಮೂಡಬಿದ್ರೆ, ರವಿಚಂದ್ರ ಕೊಂಚಾಡಿ, ಗಿರಿಜಾ ಮೂಡಬಿದ್ರೆ, ಬಿ ಕೆ ಇಮ್ತಿಯಾಜ್, ವಸಂತಿ ಕುಪ್ಪೆಪದವು, ಲೋಕಾಕ್ಷಿ ಬಂಟ್ವಾಳ, ಈಶ್ಬರೀ ಬೆಳ್ತಂಗಡಿ, ರೋಹಿದಾಸ್ ಭಟ್ನಗರ, ಭವ್ಯಾ ಮುಚ್ಚೂರುರವರು ಆಯ್ಕೆಗೊಂಡರು. ಜಿಲ್ಲಾ ಸಮಿತಿ ಸದಸ್ಯರುಗಳಾಗಿ ವಿವಿಧ ಯೂನಿಯನ್ ಹಾಗೂ ಸಂಘಟನೆಗಳ 35 ಮಂದಿ ಪ್ರಮುಖ ನಾಯಕರುಗಳನ್ನು ಆರಿಸಲಾಯಿತು.




