ಮಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಯಾದ CITU ನ 18ನೇ ದ.ಕ.ಜಿಲ್ಲಾ ಸಮ್ಮೇಳನ ಅಕ್ಟೋಬರ್ 5 ಮತ್ತು 6ರಂದು ಎರಡು ದಿನಗಳ ಕಾಲ ಮಂಗಳೂರಿನ ಬೋಳಾರದಲ್ಲಿ ಅತ್ಯಂತ ಯಶಸ್ವಿಯಾಗಿ ಜರುಗಿತು.
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
- ನಮ್ಮ ಪ್ರತಿಭೆಗಳು ದೆಹಲಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿರುವುದು ಸಂತಸದ ವಿಷಯ: ಕೆ.ಸುಧಾಕರ್
ಜಿಲ್ಲೆಯ ಕಾರ್ಮಿಕ ವರ್ಗಕ್ಕೆ ಬಾಧಿಸುವ ಹಲವಾರು ಅಂಶಗಳ ಬಗ್ಗೆ ನಿರ್ಣಯಗಳನ್ನು ಕೈಗೊಂಡ ಸಮ್ಮೇಳನವು ಮುಂಬರುವ ದಿನಗಳಲ್ಲಿ ಪ್ರಬಲ ಹೋರಾಟಗಳನ್ನು ರೂಪಿಸಲು ತೀರ್ಮಾನ ಕೈಗೊಂಡಿತು.ಸಮ್ಮೇಳನವು ಮುಂದಿನ ಮೂರು ವರ್ಷಕ್ಕೆ ನೂತನ ಜಿಲ್ಲಾ ಸಮಿತಿಯನ್ನು ಆಯ್ಕೆಗೊಳಿಸಿತು.
ನೂತನ ಜಿಲ್ಲಾಧ್ಯಕ್ಷರಾಗಿ ಬಿ ಎಂ ಭಟ್,ಪ್ರಧಾನ ಕಾರ್ಯದರ್ಶಿಯಾಗಿ ಸುನಿಲ್ ಕುಮಾರ್ ಬಜಾಲ್ ಹಾಗೂ ಖಜಾಂಚಿಯಾಗಿ ಯೋಗೀಶ್ ಜಪ್ಪಿನಮೊಗರುರರವರನ್ನು ಸರ್ವಾನುಮತದಿಂದ ಆರಿಸಲಾಯಿತು. ಉಪಾಧ್ಯಕ್ಷರುಗಳಾಗಿ ಜೆ ಬಾಲಕೃಷ್ಣ ಶೆಟ್ಟಿ, ಸುಕುಮಾರ್ ತೊಕ್ಕೋಟು, ವಸಂತ ಆಚಾರಿ, ಪದ್ಮಾವತಿ ಶೆಟ್ಟಿ, ರಮಣಿ ಮೂಡಬಿದ್ರೆ, ಯಾದವ ಶೆಟ್ಟಿ, ಸುಂದರ ಕುಂಪಲ, ನೋಣಯ್ಯಗೌಡ ಹಾಗೂ ಕಾರ್ಯದರ್ಶಿಗಳಾಗಿ ರಾಧಾ ಮೂಡಬಿದ್ರೆ, ರವಿಚಂದ್ರ ಕೊಂಚಾಡಿ, ಗಿರಿಜಾ ಮೂಡಬಿದ್ರೆ, ಬಿ ಕೆ ಇಮ್ತಿಯಾಜ್, ವಸಂತಿ ಕುಪ್ಪೆಪದವು, ಲೋಕಾಕ್ಷಿ ಬಂಟ್ವಾಳ, ಈಶ್ಬರೀ ಬೆಳ್ತಂಗಡಿ, ರೋಹಿದಾಸ್ ಭಟ್ನಗರ, ಭವ್ಯಾ ಮುಚ್ಚೂರುರವರು ಆಯ್ಕೆಗೊಂಡರು. ಜಿಲ್ಲಾ ಸಮಿತಿ ಸದಸ್ಯರುಗಳಾಗಿ ವಿವಿಧ ಯೂನಿಯನ್ ಹಾಗೂ ಸಂಘಟನೆಗಳ 35 ಮಂದಿ ಪ್ರಮುಖ ನಾಯಕರುಗಳನ್ನು ಆರಿಸಲಾಯಿತು.




