ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಹಗರಣದ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಬಂಧನದ ಬೆನ್ನಲ್ಲೇ ಜಾರಿ ನಿರ್ದೇಶನಾಲಯ(ಇಡಿ) ಅಧಿಕಾರಿಗಳು ಅವರ ಪತ್ನಿ ಮಂಜುಳಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
ಡಾಲರ್ಸ್ ಕಾಲೋನಿ ನಿವಾಸದಿಂದ ಶಾಸಕ ನಾಗೇಂದ್ರ ಪತ್ನಿ ಮಂಜುಳಾರನ್ನು ವಶಕ್ಕೆ ಪಡೆದು ಇಡಿ ಕಚೇರಿ ಕರೆ ತಂದು ಹಲವು ಮಾಹಿತಿ ಪಡೆದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಮಂಜುಳಾ ಅವರ ಹೆಸರಲ್ಲಿ ಹಣದ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅವ್ಯವಹಾರ ನಡೆದ ಸಮಯದಲ್ಲಿ ಮಂಜುಳಾ ಅವರ ಬ್ಯಾಂಕ್ ಖಾತೆಗಳಿಗೂ ಹಣ ಬಂದಿರುವ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ವಹಿವಾಟಿನ ಮೂಲ ಪ್ರಶ್ನಿಸಿದ್ದಾರೆ.




