ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಅನುಮತಿ ನೀಡಿದೆ.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಅಧಿಸೂಚನೆಗಳನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ನ್ಯಾಯಮೂರ್ತಿ ಕೆ.ಸೋಮಶೇಖರ್ ನೇತೃತ್ವದ ವಿಭಾಗೀಯ ನ್ಯಾಯಪೀಠ ರದ್ದುಪಡಿಸಿದೆ. ಈ ಕುರಿತಂತೆ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿದೆ.
ಈ ಮೂಲಕ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಮಧ್ಯದಲ್ಲೇ ತಡೆಹಿಡಿಯಲ್ಪಟ್ಟ 5, 8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆಯನ್ನು ಮುಂದುವರಿಸಲು ರಾಜ್ಯ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಪಬ್ಲಿಕ್ ಪರೀಕ್ಷೆ ನಡೆಸುವ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ರದ್ದುಗೊಳಿಸಿದ್ದ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಹೈಕೋರ್ಟ್ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ನ ವಿಭಾಗೀಯ ಪೀಠ ಎತ್ತಿಹಿಡಿದಿದೆ.
ಸುದೀರ್ಘ ವಿಚಾರಣೆ ನಡೆಸಿದ ನ್ಯಾ. ಸೋಮಶೇಖರ್ ಹಾಗೂ ನ್ಯಾ.ರಾಜೇಶ್ ರೈ ಅವರನ್ನು ಒಳಗೊಂಡ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅಸ್ತು ಎಂದಿದೆ. ಜತೆಗೇ ಉಳಿದ ವಿಷಯಗಳ ಪರೀಕ್ಷೆ ನಡೆಸಲು ಸೂಕ್ತ ಮತ್ತು ತುರ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಸೂಚನೆ ನೀಡಿದೆ.
ಮಾ.25ರಿಂದ ನಡೆಯಲಿದೆ ಪರೀಕ್ಷೆ: ಇದೇ ವೇಳೆ 5, 8 ಮತ್ತು 9ನೇ ತರಗತಿಯ ಉಳಿದ ಪರೀಕ್ಷೆಗಳನ್ನು ಮಾ.25 ರ ಸೋಮವಾರದಿಂದಲೇ ನಡೆಸುವ ಬಗ್ಗೆ ಕೋರ್ಟ್ ಗೆ ಸರ್ಕಾರ ಮಾಹಿತಿ ನೀಡಿದೆ. ಈಗಾಗಲೇ ಐದನೇ ತರಗತಿ ನಾಲ್ಕು ವಿಷಯಗಳ ಪರೀಕ್ಷೆ ಮುಗಿದಿವೆ. 8 ಹಾಗೂ 9 ತಗರತಿಗಳ ಎರಡೆರಡು ವಿಷಯಗಳ ಪರೀಕ್ಷೆ ನಡೆದಿವೆ. 11ನೇ ತರಗತಿ ಎಲ್ಲಾ ವಿಷಯಗಳ ಪರೀಕ್ಷೆ ಮುಕ್ತಾಯವಾಗಿದ್ದು, ಫಲಿತಾಂಶ ಹೊರಬರಬೇಕಿದೆ.
ಕಳೆದ ಮಾರ್ಚ್ 13ರಂದು ಸುಪ್ರೀಂಕೋರ್ಟ್ ಈ ಪರೀಕ್ಷೆಗೆ ತಡೆಯಾಜ್ಞೆ ನೀಡಿ ಹೈಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಸೂಚಿಸಿತ್ತು. ಅದರನುಸಾರವಾಗಿ ಈಗ ತೀರ್ಪು ನೀಡಲಾಗಿದೆ.
ಹೈಕೋರ್ಟ್ ಮೊರೆ: ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಡೆಸುತ್ತಿರುವ ಈ ಪರೀಕ್ಷೆ ಮಾರ್ಚ್ 11ರಂದು ಆರಂಭಗೊಂಡು ಮಾರ್ಚ್ 18ಕ್ಕೆ ಮುಗಿಯಬೇಕಾಗಿತ್ತು. ಮಾರ್ಚ್ 12ರಂದು ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿ ಹೈಕೋರ್ಟ್ಗೆ ಹೋಗುವಂತೆ ಸೂಚಿಸಿದಾಗ ಸರ್ಕಾರ ತಕ್ಷಣವೇ ಹೈಕೋರ್ಟ್ ಬಾಗಿಲು ತಟ್ಟುತ್ತದೆ ಎಂಬ ನಿರೀಕ್ಷೆ ಇತ್ತು. ಆದರೆ, ಈ ವಿಚಾರವನ್ನು ಹೇಗೆ ನಿಭಾಯಿಸಬೇಕು ಎಂದು ತಿಳಿಯದ ಶಿಕ್ಷಣ ಇಲಾಖೆ ಮತ್ತು ಅಧಿಕಾರಿಗಳು ಒಂದೆರಡು ದಿನ ತಡವಾಗಿ ಹೈಕೋರ್ಟ್ ಮೊರೆ ಹೋಗಿದ್ದರು.
ಇದೀಗ ಹೈಕೋರ್ಟ್ನಲ್ಲಿ ಕಳೆದ ಕೆಲವು ದಿನಗಳಿಂದ ವಿಚಾರಣೆ ನಡೆಯುತ್ತಿದೆ. ಶಿಕ್ಷಣ ಇಲಾಖೆಗೆ ಪಬ್ಲಿಕ್ ಪರೀಕ್ಷೆ ನಡೆಸುವ ಅಧಿಕಾರವಿಲ್ಲ ಮತ್ತು ಅದು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವುದಿಲ್ಲ ಎಂಬ ವಾದದೊಂದಿಗೆ ಖಾಸಗಿ ಶಾಲೆಗಳ ಸಂಘಟನೆ ರುಪ್ಸಾ ವಾದ ಮಂಡಿಸುತ್ತಿದೆ. ಈ ಬಗ್ಗೆ ಹೈಕೋರ್ಟ್ನಲ್ಲಿ ನಡೆದ ವಿಚಾರಣೆಯ ಸಂದರ್ಭ ಎರಡೂ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್, ನ್ಯಾಯಮೂರ್ತಿ ಕೆ. ರಾಜೇಶ್ ರೈ ಅವರನ್ನು ಒಳಗೊಂಡ ವಿಭಾಗೀಯ ಪೀಠ ತೀರ್ಪನ್ನು ಕಾಯ್ದಿರಿಸಿ ಈ ಬಗ್ಗೆ ಇಂದು ತೀರ್ಪು ನೀಡಿದೆ.




